ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

Published : May 23, 2023, 07:26 PM IST

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸರ್ಕಾರ ರಚನೆಗೊಂಡು 4 ದಿನವೂ ಕಳೆದಿಲ್ಲ. ಈಗ ಕಾಂಗ್ರೆಸ್‌ನಲ್ಲಿಯೇ ಕಿಚ್ಚು ಹೊತ್ತಿಸುವಂತಹ ಹೇಳಿಕೆಯನ್ನು ಕ್ಯಾಬಿನೆಟ್‌ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು (ಮೇ 23):  ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸರ್ಕಾರ ರಚನೆಗೊಂಡು ಇನ್ನೂ ನಾಲ್ಕು  ದಿನವೂ ಕಳೆದಿಲ್ಲ. ಸಚಿವರಿಗೆ ಖಾತೆಯೂ ಕೂಡ ಹಂಚಿಕೆಯಾಗಿಲ್ಲ. ಇಷ್ಟು ಕಡಿಮೆ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿಯೇ ಕಿಚ್ಚು ಹೊತ್ತಿಸುವಂತಹ ಹೇಳಿಕೆಯನ್ನು ಕ್ಯಾಬಿನೆಟ್‌ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.  ಈಗಾಗಲೇ ಸರ್ಕಾರದ ಬಗ್ಗೆ ಮಾತನಾಡಿದ್ದ ಎಂ.ಬಿ. ಪಾಟೀಲ್‌ಗೆ ಸುಮ್ಮನಿರುವಂತೆ ಡಿ.ಕೆ. ಶಿವಕುಮಾರ್‌ ಎಚ್ಚರಿಕೆಯನ್ನೂ ರವಾನಿಸಿದ್ದರು. ಆದರೂ, ಅವರಿಗೆ ಕ್ಯಾರೇ ಎನ್ನದೇ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂಬರ್ಥದಲ್ಲಿ "ಪವರ್‌ ಶೇರಿಂಗ್‌" ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ತಾನೇ ಆಗಬೇಕೆಂದು ಹಠ ಹಿಡಿದಿದ್ದರೂ ಕೊನೆಗೆ ಹೈಕಮಾಂಡ್‌ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದ ಡಿ.ಕೆ. ಶಿವಕುಮಾರ್‌ಗೆ 30 ತಿಂಗಳ ಅವಧಿಗೆ ಸಿಎಂ ಸ್ಥಾನ ಕೊಡುವುದಾಗಿ ಹೇಳಲಾಗಿದೆಯಂತೆ. ಆದರೆ, ಈಗ ಎಂ.ಬಿ. ಪಾಟೀಲ್‌ ಹೇಳಿಕೆ ಮಾತ್ರ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಸೆಗೆ ತಣ್ಣೀರು ಎರಚುವಂತಿದೆ. ಈಗ ಇಡೀ ರಾಜ್ಯದಲ್ಲಿಯೇ ಕಾಂಗ್ರೆಸ್‌ನಲ್ಲಿ ಪರ ವಿರೋಧ ಆರಂಭವಾಗಿದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more