ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

ಕಾಂಗ್ರೆಸ್‌ ಒಗ್ಗಟ್ಟಿಗೆ ಬೆಂಕಿಯಿಟ್ಟ ಎಂ.ಬಿ. ಪಾಟೀಲ್‌: ಪವರ್‌ ಶೇರಿಂಗ್‌ ಹೇಳಿಕೆ ರಹಸ್ಯವೇನು?

Published : May 23, 2023, 07:26 PM IST

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸರ್ಕಾರ ರಚನೆಗೊಂಡು 4 ದಿನವೂ ಕಳೆದಿಲ್ಲ. ಈಗ ಕಾಂಗ್ರೆಸ್‌ನಲ್ಲಿಯೇ ಕಿಚ್ಚು ಹೊತ್ತಿಸುವಂತಹ ಹೇಳಿಕೆಯನ್ನು ಕ್ಯಾಬಿನೆಟ್‌ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು (ಮೇ 23):  ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಸರ್ಕಾರ ರಚನೆಗೊಂಡು ಇನ್ನೂ ನಾಲ್ಕು  ದಿನವೂ ಕಳೆದಿಲ್ಲ. ಸಚಿವರಿಗೆ ಖಾತೆಯೂ ಕೂಡ ಹಂಚಿಕೆಯಾಗಿಲ್ಲ. ಇಷ್ಟು ಕಡಿಮೆ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿಯೇ ಕಿಚ್ಚು ಹೊತ್ತಿಸುವಂತಹ ಹೇಳಿಕೆಯನ್ನು ಕ್ಯಾಬಿನೆಟ್‌ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.  ಈಗಾಗಲೇ ಸರ್ಕಾರದ ಬಗ್ಗೆ ಮಾತನಾಡಿದ್ದ ಎಂ.ಬಿ. ಪಾಟೀಲ್‌ಗೆ ಸುಮ್ಮನಿರುವಂತೆ ಡಿ.ಕೆ. ಶಿವಕುಮಾರ್‌ ಎಚ್ಚರಿಕೆಯನ್ನೂ ರವಾನಿಸಿದ್ದರು. ಆದರೂ, ಅವರಿಗೆ ಕ್ಯಾರೇ ಎನ್ನದೇ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂಬರ್ಥದಲ್ಲಿ "ಪವರ್‌ ಶೇರಿಂಗ್‌" ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ತಾನೇ ಆಗಬೇಕೆಂದು ಹಠ ಹಿಡಿದಿದ್ದರೂ ಕೊನೆಗೆ ಹೈಕಮಾಂಡ್‌ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದ ಡಿ.ಕೆ. ಶಿವಕುಮಾರ್‌ಗೆ 30 ತಿಂಗಳ ಅವಧಿಗೆ ಸಿಎಂ ಸ್ಥಾನ ಕೊಡುವುದಾಗಿ ಹೇಳಲಾಗಿದೆಯಂತೆ. ಆದರೆ, ಈಗ ಎಂ.ಬಿ. ಪಾಟೀಲ್‌ ಹೇಳಿಕೆ ಮಾತ್ರ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಸೆಗೆ ತಣ್ಣೀರು ಎರಚುವಂತಿದೆ. ಈಗ ಇಡೀ ರಾಜ್ಯದಲ್ಲಿಯೇ ಕಾಂಗ್ರೆಸ್‌ನಲ್ಲಿ ಪರ ವಿರೋಧ ಆರಂಭವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more