ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

Suvarna News   | Asianet News
Published : Mar 01, 2022, 12:14 PM ISTUpdated : Mar 01, 2022, 12:20 PM IST

*  ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ
*  ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ
*  ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಿ
 

ಬೆಳಗಾವಿ(ಮಾ.01): ನೀವು ಹೋರಾಟ ಮಾಡ್ತಿರೋದು ಸುಪ್ರೀಂಕೋರ್ಟ್ ವಿರುದ್ಧವೋ ಅಥವಾ ಮತ್ಯಾರ ವಿರುದ್ಧವೋ ಅಂತ ಸ್ಪಷ್ಟಪಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿತ್ತು, ಆಗ ಏನೂ ಮಾಡದೇ ಸುಳ್ಳನ್ನೇ ಬಂಡವಾಳ ಮಾಡಿ ಬಾಯಿಗೆ ಬಂದಂಗೆ ಮಾತನಾಡ್ತಾರೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

ಕಾಂಗ್ರೆಸ್‌ನಿಂದ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಶ್ಚರ್ಯಕರ ಸಂಗತಿ ಅಂದ್ರೆ ರಣದೀಪ್ ಸುರ್ಜೇವಾಲಾ ಬಂದು ಉದ್ಘಾಟನೆ ಮಾಡಿದ್ರು. ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ. ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ. ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಬೇಕು. ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡ್ತಾರೆ. ಈ ಹಿಂದೆ ಸಿಂದಗಿ ಉಪಚುನಾವಣೆ ವೇಳೆ ಸೋಲೋದು ಖಚಿತ ಆದ್ಮೇಲೆ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ರು. ಹೊಟ್ಟೆ ಪಾಡಿಗಾಗಿ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಬಿಜೆಪಿ ಸೇರಿದ್ದಾರೆ ಅಂತ ಹೇಳಿಕೆ ನೀಡಿದ್ದರು. ಹಾಗಾದ್ರೆ ನೀವು ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಪಾರ್ಟಿ ಸೇರಿಕೊಂಡಿದ್ದೀರಾ?. ಸ್ವಲ್ಪ ವಿವೇಚನೆಯಿಂದ ಮಾತನಾಡಬೇಕು ಅಂತ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more