ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

Suvarna News   | Asianet News
Published : Mar 01, 2022, 12:14 PM ISTUpdated : Mar 01, 2022, 12:20 PM IST

*  ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ
*  ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ
*  ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಿ
 

ಬೆಳಗಾವಿ(ಮಾ.01): ನೀವು ಹೋರಾಟ ಮಾಡ್ತಿರೋದು ಸುಪ್ರೀಂಕೋರ್ಟ್ ವಿರುದ್ಧವೋ ಅಥವಾ ಮತ್ಯಾರ ವಿರುದ್ಧವೋ ಅಂತ ಸ್ಪಷ್ಟಪಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿತ್ತು, ಆಗ ಏನೂ ಮಾಡದೇ ಸುಳ್ಳನ್ನೇ ಬಂಡವಾಳ ಮಾಡಿ ಬಾಯಿಗೆ ಬಂದಂಗೆ ಮಾತನಾಡ್ತಾರೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

ಕಾಂಗ್ರೆಸ್‌ನಿಂದ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಶ್ಚರ್ಯಕರ ಸಂಗತಿ ಅಂದ್ರೆ ರಣದೀಪ್ ಸುರ್ಜೇವಾಲಾ ಬಂದು ಉದ್ಘಾಟನೆ ಮಾಡಿದ್ರು. ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ. ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ. ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಬೇಕು. ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡ್ತಾರೆ. ಈ ಹಿಂದೆ ಸಿಂದಗಿ ಉಪಚುನಾವಣೆ ವೇಳೆ ಸೋಲೋದು ಖಚಿತ ಆದ್ಮೇಲೆ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ರು. ಹೊಟ್ಟೆ ಪಾಡಿಗಾಗಿ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಬಿಜೆಪಿ ಸೇರಿದ್ದಾರೆ ಅಂತ ಹೇಳಿಕೆ ನೀಡಿದ್ದರು. ಹಾಗಾದ್ರೆ ನೀವು ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಪಾರ್ಟಿ ಸೇರಿಕೊಂಡಿದ್ದೀರಾ?. ಸ್ವಲ್ಪ ವಿವೇಚನೆಯಿಂದ ಮಾತನಾಡಬೇಕು ಅಂತ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more