ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

ನನ್ನ ಬಗ್ಗೆ ಮಾತನಾಡೋವಾಗ ಎಚ್ಚರಿಕೆಯಿಂದ ಮಾತನಾಡಿ: ಕಾಂಗ್ರೆಸ್‌ ವಿರುದ್ಧ ಕಾರಜೋಳ ಗರಂ

Suvarna News   | Asianet News
Published : Mar 01, 2022, 12:14 PM ISTUpdated : Mar 01, 2022, 12:20 PM IST

*  ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ
*  ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ
*  ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಿ
 

ಬೆಳಗಾವಿ(ಮಾ.01): ನೀವು ಹೋರಾಟ ಮಾಡ್ತಿರೋದು ಸುಪ್ರೀಂಕೋರ್ಟ್ ವಿರುದ್ಧವೋ ಅಥವಾ ಮತ್ಯಾರ ವಿರುದ್ಧವೋ ಅಂತ ಸ್ಪಷ್ಟಪಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರದಲ್ಲಿತ್ತು, ಆಗ ಏನೂ ಮಾಡದೇ ಸುಳ್ಳನ್ನೇ ಬಂಡವಾಳ ಮಾಡಿ ಬಾಯಿಗೆ ಬಂದಂಗೆ ಮಾತನಾಡ್ತಾರೆ ಅಂತ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್‌ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

Mekedatu Padayatra: ಕಾಂಗ್ರೆಸ್ಸಿಗರ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ

ಕಾಂಗ್ರೆಸ್‌ನಿಂದ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಶ್ಚರ್ಯಕರ ಸಂಗತಿ ಅಂದ್ರೆ ರಣದೀಪ್ ಸುರ್ಜೇವಾಲಾ ಬಂದು ಉದ್ಘಾಟನೆ ಮಾಡಿದ್ರು. ಈ ಪಾದಯಾತ್ರೆ ಯಾರ ವಿರುದ್ಧ ಅಂತಾ ಸುರ್ಜೇವಾಲಾರನ್ನ ಕೇಳ್ತೇನೆ. ಸುಪ್ರೀಂಕೋರ್ಟ್‌ನಲ್ಲಿ ಮೇಕೆದಾಟು ಯೋಜನೆ ವಿಷಯ ಪೆಂಡಿಂಗ್ ಇದೆ. ಈ ಸಂದರ್ಭದಲ್ಲಿ ನೀವು ಹೋರಾಟ ಮಾಡ್ತಿದ್ದು ಯಾಕೆ ಅಂತ ಸ್ಪಷ್ಟಪಡಿಸಬೇಕು. ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡ್ತಾರೆ. ಈ ಹಿಂದೆ ಸಿಂದಗಿ ಉಪಚುನಾವಣೆ ವೇಳೆ ಸೋಲೋದು ಖಚಿತ ಆದ್ಮೇಲೆ ನನ್ನನ್ನೇ ಟಾರ್ಗೆಟ್ ಮಾಡಿ ಮಾತನಾಡಿದ್ರು. ಹೊಟ್ಟೆ ಪಾಡಿಗಾಗಿ ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ ಬಿಜೆಪಿ ಸೇರಿದ್ದಾರೆ ಅಂತ ಹೇಳಿಕೆ ನೀಡಿದ್ದರು. ಹಾಗಾದ್ರೆ ನೀವು ಹೊಟ್ಟೆ ಪಾಡಿಗಾಗಿ ಬೇರೆ ಬೇರೆ ಪಾರ್ಟಿ ಸೇರಿಕೊಂಡಿದ್ದೀರಾ?. ಸ್ವಲ್ಪ ವಿವೇಚನೆಯಿಂದ ಮಾತನಾಡಬೇಕು ಅಂತ ಕಾಂಗ್ರೆಸ್‌ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. 
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more