ಖಾತೆ ಸಿಕ್ಕ ಬೆನ್ನಲ್ಲೇ ಕ್ಯಾತೆ ತೆಗೆದವರಿಗೆ ಮುನಿರತ್ನ ಟಾಂಗ್

Aug 9, 2021, 10:07 AM IST

ಬೆಂಗಳೂರು (ಆ.09): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರ ಬೆನ್ನಲ್ಲೇ ಹಲವರು ಸಚಿವ ಸ್ಥಾನಕ್ಕಾಗಿ ಅಸಮಾಧಾನಗೊಂಡರೆ ಇನ್ನು ಕೆಲವರು ಕೊಟ್ಟ ಖಾತೆ ಬಗ್ಗೆ ಅಸಮಾಧಾನಗೊಂಡರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಖಾತೆ ಬಗ್ಗೆ ಕ್ಯಾತೆ ತೆಗೆದವರಿಗೆ ಸಚಿವ ಮುನಿರತ್ನ ಟಾಂಗ್ ನೀಡಿದ್ದಾರೆ. ಬಿಜೆಪಿ ಸೇರಿದಾಗ ನಮಗೆ ಸ್ಥಾನ ಮಾನ ಕೊಟ್ಟಿದೆ. ಬಿಜೆಪಿಗಾಗಿ ಸೇವೆ ಮಾಡಿ ಬಳಿಕ ಖಾತೆ ಕೆಳೋಣ ಎಂದಿದ್ದಾರೆ. ಇಷ್ಟು ದಿನ ತಾಳ್ಮೆಯಿಂದ ಕಾದಿದ್ದಕ್ಕೆ ನನಗೆ ಈಗ ಸ್ಥಾನ ಸಿಕ್ಕಿದೆ ಎಂದಿದ್ದಾರೆ.