ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

ಶ್ರೀರಾಮುಲು ನಾವು ಜೊತೆಗಿದ್ದೆವು ಅವರ ಸೋಲಿಗೆ ಅನುಕಂಪವಿದೆ: ಸಚಿವ ನಾಗೇಂದ್ರ

Published : Jun 05, 2024, 09:17 AM IST

ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ. ಆದ್ರೆ ಶ್ರೀರಾಮುಲು ಅವರ ಸೋಲಿಗೆ ಅನುಕಂಪವಿದೆ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. 

ಬಳ್ಳಾರಿ ಗೆದ್ದು ಸೋನಿಯಾಗಾಂಧಿಗೆ (Sonia Gandhi) ಗಿಫ್ಟ್ ಕೊಡ್ತೇವೆ ಎಂದಿದ್ದೆವು, ಈಗ ಗಿಫ್ಟ್ ಕೊಟ್ಟಿದ್ದೇವೆ. ಬಿಜೆಪಿ ದುರಾಡಳಿತವೇ ಈ ಸೋಲಿಗೆ ಕಾರಣ ಎಂದು ಸಚಿವ ನಾಗೇಂದ್ರ (Minister Nagendra) ಹೇಳಿಕೆ ನೀಡಿದ್ದಾರೆ. ಅದಾಗ್ಯೂ ಶ್ರೀರಾಮುಲು (Sriramulu) ಸೋಲಿಗೆ ಅನುಕಂಪವಿದೆ ಎಂದು ಬಳ್ಳಾರಿ ಲೋಕಸಭೆ ಗೆಲುವಿನ ರೂವಾರಿ  ನಾಗೇಂದ್ರ ಸುವರ್ಣ ನ್ಯೂಸ್ ಗೆ ಹೇಳಿಕೆ ನೀಡಿದ್ದಾರೆ. ಶ್ರೀರಾಮುಲು ನಾವು ಜೊತೆಗಿದ್ದೆವು, ಸ್ನೇಹಿತರು ಹಾಗೂ ಅಣ್ಣತಮ್ಮಂದಿರು. ಆದರೆ, ರಾಜಕೀಯ ವಿರೋಧಿಗಳು, ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಎಲ್ಲರು ಈ ಗೆಲುವಿಗೆ ಕಾರಣ ಎಂದು ಸಂತಸ ಹಂಚಿಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿ, ನನಗೆ ರಾಜೀನಾಮೆ ಕೊಡುವಂತೆ ಒತ್ತಡವೇ ಇಲ್ಲ. ನಾನು ರಾಜೀನಾಮೆ ಕೊಡೋ ಪ್ರಶ್ನೆಯೇ ಇಲ್ಲ, ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲು ಈಗಾಗಲೇ ಎಸ್ ಐ ಟಿ ಗೆ ಕೊಡಲಾಗಿದೆ, ಎಸ್ ಐ ಟಿ ಗೆ ಕೊಡುವಂತೆ ಒತ್ತಾಯ ಮಾಡಿದ್ದು ಸಹ ನಾನೇ, ಭ್ರಷ್ಟಾಚಾರಿಗಳನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more