ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

Published : Jan 14, 2024, 08:21 PM IST

ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. 

ಕೊಪ್ಪಳ (ಜ.14): ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ.

ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more