ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

Published : Jan 14, 2024, 08:21 PM IST

ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. 

ಕೊಪ್ಪಳ (ಜ.14): ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ.

ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more