ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

ಅನಂತ್ ಕುಮಾರ್ ಹೆಗಡೆ ಯಾವ ಪುಟಗೋಸಿ? ಸಿಎಂ ಕಾಲಿನ ಧೂಳಿಗೂ ಸಮನಲ್ಲ: ಸಚಿವ ತಂಗಡಗಿ ಆಕ್ರೋಶ

Published : Jan 14, 2024, 08:21 PM IST

ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. 

ಕೊಪ್ಪಳ (ಜ.14): ಸಿಎಂ ಸಿದ್ದರಾಮಯ್ಯ ಮುಂದೆ ಸಂಸದ ಅನಂತ್ ಕುಮಾರ್‌ ಹೆಗಡೆ ಪುಟಗೋಸಿಗೆ ಸಮನಲ್ಲ. ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುವ ನಿಮ್ಮಂಥ ನಾಯಿಗಳಿಗೆ ನಾನು ಅಲ್ಲಿಗೆ ಬಂದು ಉತ್ತರ ಕೊಡಬೇಕಾಗುತ್ತೆ ಮಗನೆ ಎಂದು ಸಚಿವ ಶಿವರಾಜ್‌ ತಂಗಡಗಿ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದಲ್ಲಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್‌ ಕುಮಾರ್‌ಗೆ ಅವನದೇ ಭಾಷೆಯಲ್ಲಿ ಉತ್ತರ ಕೊಡಲು ನನಗೂ ಬರುತ್ತೆ.‌ ಆದರೆ ನನ್ನ ಹಿರಿಯರು ನನಗೆ ಸಂಸ್ಕಾರ ಕಲಿಸಿದ್ದಾರೆ.

ಅದಕ್ಕಾಗಿ ಅವನಿಗೆ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತಿಲ್ಲ. ಬದಲಿಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ಮೊದಲು ಮತ್ತು ಕೊನೆ. ಸಿದ್ದರಾಮಯ್ಯ ಬಗ್ಗೆ ಅವನು ಮಾತನಾಡಬಾರದು. ಸಿದ್ದರಾಮಯ್ಯ ಅವರಿಗೆ ಆಗಿರುವ ಅನುಭವ‌ದಷ್ಟು ಅವನಿಗೆ ವಯಸ್ಸಾಗಿಲ್ಲ. ಅವರ ಕಾಲಿನ ಧೂಳಿಗೂ ಹೆಗಡೆ ಸಮನಲ್ಲ. ನಾನೂ ಕೂಡ ಹೀಗೆ ಮಾತನಾಡಬಾರದು. ಆದರೆ ಅವನಾಡಿದ ಮಾತಿನಿಂದ ನೋವಾಗಿ ಹೀಗೆ ಹೇಳಿದ್ದೇನೆ. ಇಂಥ ನಾಯಿಗಳಿಗೆ ನಾವು ಬುದ್ಧಿ ಕಲಿಸುತ್ತೇವೆ. ಹೀಗೆ ಮಾತು ಮುಂದುವರೆಸಿದರೆ, ನಾನು ಮುಂದೆ ಉತ್ತರ ಕರ್ನಾಟಕದ ಭಾಷೆಯಲ್ಲಿ ಉತ್ತರ ಕೊಡ ಬೇಕಾಗುತ್ತೆ. ಇವನಿಗಿಂತ ಕೆಟ್ಟ ಭಾಷೆಯಲ್ಲಿ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more