ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

ಮುಸ್ಲಿಮರ ಓಲೈಕೆಗೆ ಮುಂದಾದ ಬಿಜೆಪಿ ಸಚಿವ! ಮತ್ತೆ ಹಳೆ ಕ್ಷೇತ್ರಕ್ಕೆ ಮರಳಿ ಬರ್ತಾರಾ ಸಚಿವ ಶ್ರೀರಾಮುಲು?

Published : May 07, 2022, 10:10 PM IST

ಚುನಾವಣೆ ಹೊಸ್ತಿಲಿನಲ್ಲಿ ಸ್ಪರ್ಧೆಯ ಲೆಕ್ಕಾಚಾರ ಶುರುವಾಗಿದೆ. ಮೊಳಕಾಲ್ಮೂರು ಶಾಸಕರಾಗಿರುವ ಶ್ರೀರಾಮುಲು ಮತ್ತೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರಾ ಎನ್ನುವ ಲೆಕ್ಕಾಚಾರಗಳಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ.

ಬೆಂಗಳೂರು (ಮೇ. 7): ಬಿಜೆಪಿ (BJP) ಪ್ರಭಾವಿ ಸಚಿವರೊಬ್ಬರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ(assembly elections)  ಕ್ಷೇತ್ರ ಬದಲಾವಣೆಯ ಸೂಚನೆ ಕೊಟ್ಟಿದ್ದಾರೆ. ಮೊಳಕಾಲ್ಮೂರು (Molakalmuru) ಶಾಸಕರಾಗಿರುವ ಸಚಿವ ಶ್ರೀರಾಮುಲು(b sriramulu) ತಮ್ಮ ಹಿಂದಿನ ಕ್ಷೇತ್ರವಾದ ಬಳ್ಳಾರಿ ಗ್ರಾಮೀಣದ (Bellari Rural) ಮೇಲೆ ಕಣ್ಣಿಟ್ಟಿದ್ದು ಈ ನಿಟ್ಟಿನಲ್ಲಿ  ಈಗಾಗಲೇ ಪ್ರಯತ್ನವನ್ನೂ ಆರಂಭಿಸಿದ್ದಾರೆ ಎನ್ನಲಾಗಿದೆ.

ಮುಸ್ಲಿಂ (Muslim) ಒಲೈಕೆಗೆ ಮುಂದಾಗಿರೋ ಶ್ರೀರಾಮುಲು‌ ಅವರು ಮಸೀದಿಗಳಿಗೆ ಡೆವಲಪ್ಮೆಂಟ್ (Mosques Development) ಹೆಸರಲ್ಲಿ ಭರ್ಜರಿ ದೇಣಿಗೆಯನ್ನು ನೀಡ್ತಿದ್ದಾರೆ. ಇದಕ್ಕೆ ಕಾರಣ ಅವರು ಮತ್ತೊಮ್ಮೆ ತವರು ಕ್ಷೇತ್ರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿರೋದು ಎನ್ನುವುದು ಗುಟ್ಟಾಗಿಲ್ಲ. ಒಂದು ಕಡೆ ಸಂಘ ಪರಿವಾರದವರ ದೃಷ್ಠಿಯಲ್ಲಿ ಅಲ್ಪ ಸಂಖ್ಯಾತರರಿಂದ ದೂರವಿರಬೇಕು. ಆದರೆ ಇಲ್ಲಿ ದೂರವಿದ್ರೇ ಇಲ್ಲಿ ಮತ ಪಡೆಯೋದು ಕಷ್ಟವಾಗಿದೆ. ಹೀಗಾಗಿ ಸದ್ಯ ಶ್ರೀರಾಮುಲು‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

KOLAR: ವರ್ತೂರು ಪ್ರಕಾಶ್ ಹಾಗೂ ಮಂಜುನಾಥ ಗೌಡ ಬಿಜೆಪಿ ಸೇರ್ಪಡೆಗೆ ವಿರೋಧ!

ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕಾದಲ್ಲಿ ಮುಸ್ಲಿಂ ಮತಗಳೇ ನಿರ್ಣಾಯಕ. ಹಾಗಾಗಿ ಅಲ್ಲಿನ ಮಸೀದಿಗಳಿಗೆ ಅವರು ದೇಣಿಗೆ ನೀಡಲು ಆರಂಭಿಸಿದ್ದಾರೆ ಎನ್ನಲಾಗಿದೆ. ಹಿಜಾಬ್ ಹಾಗೂ ಹಲಾಲ್ ವಿಚಾರದ ವೇಳೆ ಸುಮ್ಮನ್ನಿದ್ದ ಶ್ರೀರಾಮುಲು ಈಗ ಮತಕ್ಕಾಗಿ ಓಲೈಕೆ ರಾಜಕಾರಣಕ್ಕೆ ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more