MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

MLA Balakrishna: ನಿಮ್ಮ ಮತ ಅಕ್ಷತೆಗಾ…? ಐದು ಗ್ಯಾರಂಟಿಗಾ..? ಕೈ ಶಾಸಕನ ಬಿಗ್ ಬಾಂಬ್..!

Published : Feb 01, 2024, 12:56 PM IST

ಗ್ಯಾರಂಟಿ ಯೋಜನೆಗಳು ರದ್ದಾಗುವ ಸುಳಿವು ಕೊಟ್ಟರಾ ಕಾಂಗ್ರೆಸ್ ಶಾಸಕ..?    
ಕೈ ಶಾಸಕ ನುಡಿದ ಗ್ಯಾರಂಟಿ ಭವಿಷ್ಯ.. ಬಿಜೆಪಿಗೆ ಸಿಕ್ಕಿತು ಮತ್ತೊಂದು ಅಸ್ತ್ರ..!
"ಮತದಾರರನ್ನು ಕಾಂಗ್ರೆಸ್ ಬ್ಲ್ಯಾಕ್‌ಮೇಲ್ ಮಾಡ್ತಿದೆ" ಅಂದ್ರು ವಿಜಯೇಂದ್ರ..!

ಕರ್ನಾಟಕ ಕುರುಕ್ಷೇತ್ರದಲ್ಲಿ ಕಾಂಗ್ರೆಸ್'ಗೆ ಪ್ರಚಂಡ ಜಯ ತಂದು ಕೊಟ್ಟಿತ್ತು ಗ್ಯಾರಂಟಿ ಅಸ್ತ್ರ. ಲೋಕಸಮರದಲ್ಲೂ ಕೈ ಬತ್ತಳಿಕೆಯಿಂದ ನುಗ್ಗಿ ಬರಲಿದೆ  ಮತ್ತದೇ ಆಯುಧ. ಗ್ಯಾರಂಟಿಗಳ(Guarantees) ಮೇಲೆ ಗ್ಯಾರಂಟಿಗಳನ್ನೇ ಘೋಷಿಸಿ, ಪಂಚ ಗ್ಯಾರಂಟಿಗಳ ಬಲದಿಂದಲೇ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ ಕಾಂಗ್ರೆಸ್(Congress) ಪಕ್ಷ. ಕಾಂಗ್ರೆಸ್'ನ ಗ್ಯಾರಂಟಿ ಸರ್ಕಾರಕ್ಕೆ ಸಿದ್ದರಾಮಯ್ಯ(Siddaramaiah) ಮುಖ್ಯಮಂತ್ರಿ, ಡಿಕೆ ಶಿವಕುಮಾರ್(DK Shivakumar) ಉಪಮುಖ್ಯಮಂತ್ರಿ. ಜೋಡೆತ್ತು ಸರ್ಕಾರ 8 ತಿಂಗಳು ಪೂರೈಸಿ 9ನೇ ತಿಂಗಳಿಗೆ ಕಾಲಿಟ್ಟಿದೆ. ಈಗಾಗ್ಲೇ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಗ್ಯಾರಂಟಿ ಸರ್ಕಾರ.ಈಗ ಲೋಕಸಭಾ(Loksabha) ಚುನಾವಣೆ ಹತ್ತಿರ ಬರ್ತಾ ಇದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿರೋ ಸಿದ್ದು ಸರ್ಕಾರ, ಅದನ್ನೇ ಚುನಾವಣೆಯಲ್ಲಿ ಬ್ರಹ್ಮಾಸ್ತ್ರವಾಗಿ ಪ್ರಯೋಗಿಸಲು ಮುಂದಾಗಿದೆ. ಆದ್ರೆ ಈಗ ಎದ್ದಿರೋ ಪ್ರಶ್ನೆ ಏನಂದ್ರೆ, ಈ ಗ್ಯಾರಂಟಿಗಳು ಐದು ವರ್ಷವೂ ಇರುತ್ತಾ..? ಲೋಕಸಭಾ ಚುನಾವಣೆಯ ನಂತ್ರ ಗ್ಯಾರಂಟಿ ಭವಿಷ್ಯ ಏನು..? ಲೋಕಸಂಗ್ರಾಮದಲ್ಲಿ ಕಾಂಗ್ರೆಸ್'ಗೆ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಬರದೇ ಇದ್ದರೆ, ಗ್ಯಾರಂಟಿ ಯೋಜನೆಗಳು ಕ್ಯಾನ್ಸಲ್ ಆಗಲಿವೆಯಾ..? ಇಂಥದ್ದೊಂದು ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಲು ಕಾರಣ, ಕಾಂಗ್ರೆಸ್ ಶಾಸಕ ಮಾಗಡಿ ಬಾಲಕೃಷ್ಣ ಕೊಟ್ಟಿರೋ ಅದೊಂದು ಸ್ಫೋಟಕ ಹೇಳಿಕೆ.

ಇದನ್ನೂ ವೀಕ್ಷಿಸಿ:  Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more