ಆರ್.ಆರ್. ನಗರದಲ್ಲಿ ಕಳ್ಳರು, ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ? ಡಿಕೆಶಿಗೆ ಶಾಸಕ ಮುನಿರತ್ನ ತಿರುಗೇಟು

ಆರ್.ಆರ್. ನಗರದಲ್ಲಿ ಕಳ್ಳರು, ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ? ಡಿಕೆಶಿಗೆ ಶಾಸಕ ಮುನಿರತ್ನ ತಿರುಗೇಟು

Published : Aug 16, 2023, 07:19 PM IST

ಬೆಂಗಳೂರಿನ ಆರ್.ಆರ್. ನಗರದಲ್ಲಿ ಮಾತ್ರವೇ ಕಳ್ಳರಿದ್ದಾರಾ? ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ?  ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಅವರ ವಿರುದ್ಧ ಶಾಸಕ ಮುನಿರತ್ನ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ಆ.16): ಬೆಂಗಳೂರಿನ ಆರ್.ಆರ್. ನಗರದಲ್ಲಿ ಮಾತ್ರವೇ ಕಳ್ಳರಿದ್ದಾರಾ? ಕನಕಪುರದಲ್ಲಿ ಸತ್ಯ ಹರಿಶ್ಚಂದ್ರರು ಇದ್ದಾರಾ?  ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಅವರ ವಿರುದ್ಧ ಶಾಸಕ ಮುನಿರತ್ನ ತಿರುಗೇಟು ನೀಡಿದ್ದಾರೆ.

ವೈಯಕ್ತಿಕವಾಗಿ ಡಿ.ಕೆ. ಸುರೇಶ್, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಜೊತೆ ಯಾವುದೇ ದ್ವೇಷ ಇಲ್ಲ ಅಧಿಕಾರಕ್ಕೋಸ್ಕರ ನಾನು ಪಕ್ಷ ಬಿಟ್ಟು ಹೋಗಲ್ಲ. ನಾನು ವಿಪಕ್ಷದಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿ ಬಹಳ ಗೌರವಯುತವಾಗಿ ನೋಡಿಕೊಳ್ಳುತ್ತಿದ್ದಾರೆ. ನಳೀನ್ ಕುಮಾರ್ ಕಟೀಲ್ ಗೌರವದಿಂದ ಮಾತಾಡಿಸುತ್ತಾರೆ, ಎಂದೂ ಏಕವಚನದಿಂದ ಮಾತಾಡಿಸಿಲ್ಲ. ನನ್ನ ಜೀವನದ ಗುರು, ರಾಜಕೀಯ ಗುರು ಬಿ.ಕೆ. ಹರಿಪ್ರಸಾದ್ ಅವರು. ಅದು ರಾಜಕೀಯ ಕಾರಣ ಅಲ್ಲ, ಅದು ನಮ್ಮ ಊರಿನ ಸಂಬಂಧವಾಗಿದೆ. ನನ್ನ ಮುಂದಿನ ಜೀವನದ ಆಧಾರ ಬಿಜೆಪಿ ಚಿಹ್ನೆಯಾಗಿದೆ. ಬಿಜೆಪಿ ಬಗ್ಗೆ ನಂಬಿಕೆ, ಗೌರವ ಇದೆ. 
ಬಿಜೆಪಿ ಶಾಸಕರ ಎಲ್ಲ ಕಾಮಗಾರಿಗಳನ್ನೂ ತನಿಖೆಗಳನ್ನು, ಆರೋಪಗಳನ್ನು ಮಾಡಲಿ. ಒಂದು ವೇಲೆ ನನ್ನ ಶಾಸಕ ಸ್ಥಾನದಿಂದ ತೆಗಿಯಬೇಕು ಎಂಬ ಆಲೋಚನೆ ಇದ್ದರೆ ಅದನ್ನೂ ಮಾಡಲಿ. ಒಂದು ವೇಳೆ ಯಾವುದಾದರೂ ತನಿಖೆಯಲ್ಲಿ ತಪ್ಪಿತಸ್ಥನಾಗಿ ಮಾಡಿ ಜೈಲಿಗೆ ಕಳಿಸಿದರೂ ಕಳಿಸಲಿ. ಅವರ ಕೈಯಲ್ಲಿ ಅಧಿಕಾರ ಇದೆ, ಯಾವುದನ್ನಾದರೂ ಮಾಡಲಿ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ. ಎಲ್ಲ ಕ್ಷೇತ್ರಗಳಲ್ಲಿ ಆಗಿದ್ದು, ನನ್ನ ಕ್ಷೇತ್ರದಲ್ಲಿಯೂ ಆಗುತ್ತದೆ. 28 ಕ್ಷೇತ್ರಗಳಲ್ಲಿ ಏನಾಗುತ್ತದೆಯೋ ರಾಜರಾಜೇಶ್ವರಿ ನಗರದಲ್ಲಿಯೂ ಆಗುತ್ತದೆ. ಒಂದು ವೇಳೆ ಆರ್‌.ಆರ್. ನಗರದಲ್ಲಿ ಮಾತ್ರ ಕಳ್ಳರಿದ್ದಾರೆ ಎಂಬ ತನಿಖೆ ಮಾಡಿದರೆ ಮುಂದಿನ ದಿನಗಳಲ್ಲಿ ಯಾವ ತನಿಖೆಗೆ ಕೊಡಬೇಕೋ ಅದು ನನಗೂ ಗೊತ್ತಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more