News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

Published : Nov 17, 2023, 11:33 PM IST

ಬಿಜೆಪಿ ವಿಪಕ್ಷ ನಾಯಕನಾಗಿ ಪದ್ಮನಾಭನಗರದ ಪ್ರಬಲ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಅವರನ್ನು ಆಯ್ಕೆ ಮಾಡಿದೆ. ಅಶೋಕ್‌ ಆಯ್ಕೆ ಮೂಲಕ ಯಡಿಯೂರಪ್ಪ ಬಣ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಅಶೋಕ್‌ ಅವರ ಹೆಸರನ್ನು ಬಿಎಸ್‌ ಯಡಿಯೂರಪ್ಪ ಅವರು ಘೋಷಿಸಿದರು.
 

ಬೆಂಗಳೂರು (ನ.17): ಆರ್‌.ಅಶೋಕ್‌ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಸೂಚನೆ ಸಿಕ್ಕಂತೆಯೇ ಬಿಜೆಪಿಯಲ್ಲಿ ಬಂಡಾಯ ಸ್ಪೋಟವಾಗಿದೆ. ಎಸ್‌ಟಿ ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಗೈರಾಗಿದ್ದರೆ, ಬಸವನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಂದಷ್ಟೇ ವೇಗವಾಗಿ ಹೊರನಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಲಿಂಗಾಯತರಿಗೆ ನೀಡಿದ್ದ ಕಾರಣದಿಂದ ವಿಪಕ್ಷ ಸ್ಥಾನ ಒಕ್ಕಲಿಗಲಿರಿಗೆ ಸಿಗುವುದು ಖಚಿತವಾಗಿತ್ತು. ಕೊನೆಗೆ ಅಶ್ವತ್ಥ್‌ ನಾರಾಯಣ್‌ ಹಾಗೂ ಅರಗ ಜ್ಞಾನೇಂದ್ರ ಅವರನ್ನು ಹಿಂದೆ ಹಾಕಿ ಅಶೋಕ್‌, ವಿಪಕ್ಷ ನಾಯಕರಾಗಿದ್ದಾರೆ. ಗೃಹಸಚಿವ, ಉಪಮುಖ್ಯಮಂತ್ರಿ ಸ್ಥಾನವನ್ನು ಅಶೋಕ್‌ ನಿಭಾಯಿಸಿದ್ದಾರೆ.

ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತ ಬಿಜೆಪಿ ಅಭ್ಯರ್ಥಿ ಈಗ ವಿಪಕ್ಷ ನಾಯಕ: ಅಶೋಕ್‌ ಬಗ್ಗೆ ಕಾಂಗ್ರೆಸ್‌ ಲೇವಡಿ

ರಾಜ್ಯಾಧ್ಯಕ್ಷ ಸ್ಥಾನ ದಕ್ಷಿಣ ಕರ್ನಾಟಕದವರಿಗೆ ಹೋಗಿರುವ ಕಾರಣ, ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕದವರಿಗೆ ಸಿಗುವ ನಿರೀಕ್ಷೆ ಇತ್ತು. ಆದರೆ, ಬೇರೆ ಲೆಕ್ಕಾಚಾರದಲ್ಲಿ ಅಶೋಕ್‌ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಪ್ರತಿಕ್ರಿಯಿಸಿದ್ದಾರೆ. ಇನ್ನು ವಿಪಕ್ಷ ನಾಯಕನ ರೇಸ್‌ನಲ್ಲಿದ್ದ ಅಶ್ವತ್‌ ನಾರಾಯಣ್‌ ಕೂಡ ಪಕ್ಷದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more