News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

News Hour: ಆರ್‌.ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ, ಬಿಜೆಪಿಯಲ್ಲಿ ಬಂಡಾಯ ಸ್ಫೋಟ!

Published : Nov 17, 2023, 11:33 PM IST

ಬಿಜೆಪಿ ವಿಪಕ್ಷ ನಾಯಕನಾಗಿ ಪದ್ಮನಾಭನಗರದ ಪ್ರಬಲ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಅವರನ್ನು ಆಯ್ಕೆ ಮಾಡಿದೆ. ಅಶೋಕ್‌ ಆಯ್ಕೆ ಮೂಲಕ ಯಡಿಯೂರಪ್ಪ ಬಣ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಅಶೋಕ್‌ ಅವರ ಹೆಸರನ್ನು ಬಿಎಸ್‌ ಯಡಿಯೂರಪ್ಪ ಅವರು ಘೋಷಿಸಿದರು.
 

ಬೆಂಗಳೂರು (ನ.17): ಆರ್‌.ಅಶೋಕ್‌ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಸೂಚನೆ ಸಿಕ್ಕಂತೆಯೇ ಬಿಜೆಪಿಯಲ್ಲಿ ಬಂಡಾಯ ಸ್ಪೋಟವಾಗಿದೆ. ಎಸ್‌ಟಿ ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಗೈರಾಗಿದ್ದರೆ, ಬಸವನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಬಂದಷ್ಟೇ ವೇಗವಾಗಿ ಹೊರನಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಲಿಂಗಾಯತರಿಗೆ ನೀಡಿದ್ದ ಕಾರಣದಿಂದ ವಿಪಕ್ಷ ಸ್ಥಾನ ಒಕ್ಕಲಿಗಲಿರಿಗೆ ಸಿಗುವುದು ಖಚಿತವಾಗಿತ್ತು. ಕೊನೆಗೆ ಅಶ್ವತ್ಥ್‌ ನಾರಾಯಣ್‌ ಹಾಗೂ ಅರಗ ಜ್ಞಾನೇಂದ್ರ ಅವರನ್ನು ಹಿಂದೆ ಹಾಕಿ ಅಶೋಕ್‌, ವಿಪಕ್ಷ ನಾಯಕರಾಗಿದ್ದಾರೆ. ಗೃಹಸಚಿವ, ಉಪಮುಖ್ಯಮಂತ್ರಿ ಸ್ಥಾನವನ್ನು ಅಶೋಕ್‌ ನಿಭಾಯಿಸಿದ್ದಾರೆ.

ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತ ಬಿಜೆಪಿ ಅಭ್ಯರ್ಥಿ ಈಗ ವಿಪಕ್ಷ ನಾಯಕ: ಅಶೋಕ್‌ ಬಗ್ಗೆ ಕಾಂಗ್ರೆಸ್‌ ಲೇವಡಿ

ರಾಜ್ಯಾಧ್ಯಕ್ಷ ಸ್ಥಾನ ದಕ್ಷಿಣ ಕರ್ನಾಟಕದವರಿಗೆ ಹೋಗಿರುವ ಕಾರಣ, ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕದವರಿಗೆ ಸಿಗುವ ನಿರೀಕ್ಷೆ ಇತ್ತು. ಆದರೆ, ಬೇರೆ ಲೆಕ್ಕಾಚಾರದಲ್ಲಿ ಅಶೋಕ್‌ ಅವರನ್ನು ಆಯ್ಕೆ ಮಾಡಿದ್ದಾರೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಪ್ರತಿಕ್ರಿಯಿಸಿದ್ದಾರೆ. ಇನ್ನು ವಿಪಕ್ಷ ನಾಯಕನ ರೇಸ್‌ನಲ್ಲಿದ್ದ ಅಶ್ವತ್‌ ನಾರಾಯಣ್‌ ಕೂಡ ಪಕ್ಷದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more