ಸಚಿವ ಸ್ಥಾನ ಸಿಗದಿದ್ದಕ್ಕೆ ಮತ್ತೋರ್ವ ಶಾಸಕರ ಅಸಮಾಧಾನ ಸ್ಫೋಟ

Aug 8, 2021, 1:35 PM IST

 ಬೆಂಗಳೂರು (ಆ.08): ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗಿ ಸಚಿವ ಸ್ಥಾನಗಳ ಹಂಚಿಕೆಯೂ ಆಗಿದೆ. ಇದೇ ಕೆಲವರು ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕುತ್ತಿದ್ದ ಕೆಲ ಮುಖಂಡರು ಸಿಕ್ಕ ಖಾತೆ ಬಗ್ಗೆ ಮುನಿಸು ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಬಂಡಾಯದ ಕಹಳೆ: ಅತೃಪ್ತರಿಂದ ಸಭೆ, ಮುಂದಿನ ನಡೆ ಬಗ್ಗೆ ಚರ್ಚೆ

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ನಾನು ಮೂರು ಬಾರಿ ಶಾಸಕನಾಗಿ ಅಯ್ಕೆಯಾಗಿದ್ದೇನೆ. ನನ್ನ ಕೆಲಸದ ಬಗ್ಗೆ ಪಕ್ಷದ ನಾಯಕರಿಗೆ ಗೊತ್ತಿದೆ. ಮುಂದಿನ ಬಾರಿಯಾದರೂ ಸಿಗುವ ವಿಶ್ವಾಸವಿದೆ ಎಂದರು.