ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

Published : Jan 17, 2024, 07:21 PM IST

ಲೋಕಸಭಾ ಚನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಆದರೆ, ಕೇಸರಿ ಪಡೆ ಅವರ ಬೆಂಬಲಕ್ಕೆ ನಿಲ್ಲದೇ ಕೈಬಿಟ್ಟಿದ್ದಾರೆ.
 

ಬೆಂಗಳೂರು (ಜ.17): ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಹಚ್ಚಿದ ವಿವಾದದ ಬೆಂಕಿಗೆ, ಕಾಂಗ್ರೆಸ್ ಪಾಳಯವೇ ತಿರುಗಿ ಬಿದ್ದಿದೆ. ಅನಂತ್ ಕುಮಾರ್ ವಿರುದ್ಧ ಕೈ ಯುದ್ಧ, ಮತ್ತೆ ಸಿದ್ದುಗೆ ಸವಾಲಾಗಿದೆ. ಇನ್ನು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರಿಂದ ಕಾಂಗ್ರೆಸ್‌ ನಾಯಕರು ವೈಲೆಂಟ್ ಆಗಿದ್ದರೂ, ಬಿಜೆಪಿ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಹೀಗಾಗಿ, ಸಂಸದ ಅನಂತ್ ಹೆಗಡೆ ಏಕಾಂಗಿಯಾಗಿಯೇ ಯುದ್ಧಕ್ಕೆ ಸನ್ನದ್ಧರಾಗಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭಾ ಚುನಾವಣೆ ಹತ್ತಿರವಾಗ್ತಾ ಇದ್ದ ಹಾಗೇ ಮತ್ತೆ ತಮ್ಮ ಹಳೆ ಶೈಲಿಯಲ್ಲಿ ಆಕ್ಟೀವ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮಗನೆ ಅನ್ನೋ ಶಬ್ದ ಪ್ರಯೋಗಿಸಿದ ಬೆನ್ನಲ್ಲೇ ಅನಂತ್ ಕುಮಾರ್ ಹೆಗಡೆ ವರ್ಸಸ್ ಕಾಂಗ್ರೆಸ್ ಯುದ್ಧವೇ ಶುರುವಾಗಿದೆ. ಸಂಸದರ ಮೇಲೆ ಮುಗಿ ಬಿದ್ದ ಕಾಂಗ್ರೆಸ್ ಪಡೆ, ಸಂಸ್ಕಾರ ಹೀನ ಅನಂತ್ ಕುಮಾರ್ ಹೆಗಡೆ ಅನ್ನೋ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ವೈಲೆಂಟ್ ಆಗಿದ್ರೆ ಬಿಜೆಪಿ ಸೈಲೆಂಟ್ ಆಗಿದೆ. ಕೈ ಪಾಳಯದ ಪ್ರತಿಭಟನೆಗೆ ಜಗ್ಗದ ಸಂಸದ ಅನಂತ್ ಕುಮಾರ್ ಹೆಗಡೆ ಸಿದ್ದುಗೆ ಬಹಿರಂಗ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಕಣ್ಣಿಗೆ  ಗುರಿಯಾಗಿರುವ ಹಿಂದೂ ಫೈರ್‌ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಸಿಡಿದ್ದೆದಿದ್ದಾರೆ. ಸಿಎಂ ವಿರುದ್ಧ  ಸಂಸ್ಕೃತಿ ಫೈಟ್ ಶುರುಮಾಡಿರೋ ಸಂಸದ ಬಹಿರಂಗವಾಗಿಯೇ ಚರ್ಚೆಗೆ ಬನ್ನಿ ಅಂತಾ ಪಂಥಹ್ವಾನ ನೀಡಿದ್ದಾರೆ. ಪ್ರಚೋದನಕಾರಿ ಭಾಷಣ ಅನ್ನೋ ವಿಚಾರಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ  ಎಫ್ ಐ ಆರ್ ದಾಖಲಾಗಿದೆ. ಏಕವಚನ ಪ್ರಯೋಗದ ಬಗ್ಗೆ ನಡೀತಿರೋ ರಾಜಕೀಯ ರಣರಂಗದ ರೋಚಕತೆ ಹೆಚ್ಚಾಗುತ್ತಿದೆ. ಸಿಎಂ ವಿರುದ್ಧ ಏಕವಚನ ಪ್ರಯೋಗ ಸೇರಿ ಪ್ರಚೋದನಕಾರಿ ಭಾಷಣ ವಿರುದ್ಧ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೊಂದು ಪ್ರಕರಣದ ರಾಜಕೀಯ ರೋಚಕತೆ ಪಡೀತಾ ಇದೆ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more