ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

Published : Jan 17, 2024, 07:21 PM IST

ಲೋಕಸಭಾ ಚನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಆದರೆ, ಕೇಸರಿ ಪಡೆ ಅವರ ಬೆಂಬಲಕ್ಕೆ ನಿಲ್ಲದೇ ಕೈಬಿಟ್ಟಿದ್ದಾರೆ.
 

ಬೆಂಗಳೂರು (ಜ.17): ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಹಚ್ಚಿದ ವಿವಾದದ ಬೆಂಕಿಗೆ, ಕಾಂಗ್ರೆಸ್ ಪಾಳಯವೇ ತಿರುಗಿ ಬಿದ್ದಿದೆ. ಅನಂತ್ ಕುಮಾರ್ ವಿರುದ್ಧ ಕೈ ಯುದ್ಧ, ಮತ್ತೆ ಸಿದ್ದುಗೆ ಸವಾಲಾಗಿದೆ. ಇನ್ನು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರಿಂದ ಕಾಂಗ್ರೆಸ್‌ ನಾಯಕರು ವೈಲೆಂಟ್ ಆಗಿದ್ದರೂ, ಬಿಜೆಪಿ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಹೀಗಾಗಿ, ಸಂಸದ ಅನಂತ್ ಹೆಗಡೆ ಏಕಾಂಗಿಯಾಗಿಯೇ ಯುದ್ಧಕ್ಕೆ ಸನ್ನದ್ಧರಾಗಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭಾ ಚುನಾವಣೆ ಹತ್ತಿರವಾಗ್ತಾ ಇದ್ದ ಹಾಗೇ ಮತ್ತೆ ತಮ್ಮ ಹಳೆ ಶೈಲಿಯಲ್ಲಿ ಆಕ್ಟೀವ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮಗನೆ ಅನ್ನೋ ಶಬ್ದ ಪ್ರಯೋಗಿಸಿದ ಬೆನ್ನಲ್ಲೇ ಅನಂತ್ ಕುಮಾರ್ ಹೆಗಡೆ ವರ್ಸಸ್ ಕಾಂಗ್ರೆಸ್ ಯುದ್ಧವೇ ಶುರುವಾಗಿದೆ. ಸಂಸದರ ಮೇಲೆ ಮುಗಿ ಬಿದ್ದ ಕಾಂಗ್ರೆಸ್ ಪಡೆ, ಸಂಸ್ಕಾರ ಹೀನ ಅನಂತ್ ಕುಮಾರ್ ಹೆಗಡೆ ಅನ್ನೋ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ವೈಲೆಂಟ್ ಆಗಿದ್ರೆ ಬಿಜೆಪಿ ಸೈಲೆಂಟ್ ಆಗಿದೆ. ಕೈ ಪಾಳಯದ ಪ್ರತಿಭಟನೆಗೆ ಜಗ್ಗದ ಸಂಸದ ಅನಂತ್ ಕುಮಾರ್ ಹೆಗಡೆ ಸಿದ್ದುಗೆ ಬಹಿರಂಗ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಕಣ್ಣಿಗೆ  ಗುರಿಯಾಗಿರುವ ಹಿಂದೂ ಫೈರ್‌ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಸಿಡಿದ್ದೆದಿದ್ದಾರೆ. ಸಿಎಂ ವಿರುದ್ಧ  ಸಂಸ್ಕೃತಿ ಫೈಟ್ ಶುರುಮಾಡಿರೋ ಸಂಸದ ಬಹಿರಂಗವಾಗಿಯೇ ಚರ್ಚೆಗೆ ಬನ್ನಿ ಅಂತಾ ಪಂಥಹ್ವಾನ ನೀಡಿದ್ದಾರೆ. ಪ್ರಚೋದನಕಾರಿ ಭಾಷಣ ಅನ್ನೋ ವಿಚಾರಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ  ಎಫ್ ಐ ಆರ್ ದಾಖಲಾಗಿದೆ. ಏಕವಚನ ಪ್ರಯೋಗದ ಬಗ್ಗೆ ನಡೀತಿರೋ ರಾಜಕೀಯ ರಣರಂಗದ ರೋಚಕತೆ ಹೆಚ್ಚಾಗುತ್ತಿದೆ. ಸಿಎಂ ವಿರುದ್ಧ ಏಕವಚನ ಪ್ರಯೋಗ ಸೇರಿ ಪ್ರಚೋದನಕಾರಿ ಭಾಷಣ ವಿರುದ್ಧ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೊಂದು ಪ್ರಕರಣದ ರಾಜಕೀಯ ರೋಚಕತೆ ಪಡೀತಾ ಇದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more