ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

ಲೋಕ ಸಮರಕ್ಕೂ ಮುನ್ನ ಸಿಡಿದೆದ್ದ ಅನಂತ್ ಕುಮಾರ್ ಹೆಗಡೆ; ಫೈರ್ ಬ್ರಾಂಡ್ ಜೊತೆ ನಿಲ್ಲದ ಕೇಸರಿ ಪಡೆ!

Published : Jan 17, 2024, 07:21 PM IST

ಲೋಕಸಭಾ ಚನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಆದರೆ, ಕೇಸರಿ ಪಡೆ ಅವರ ಬೆಂಬಲಕ್ಕೆ ನಿಲ್ಲದೇ ಕೈಬಿಟ್ಟಿದ್ದಾರೆ.
 

ಬೆಂಗಳೂರು (ಜ.17): ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಸಂಸದ ಅನಂತ ಕುಮಾರ್ ಹೆಗಡೆ ಹಚ್ಚಿದ ವಿವಾದದ ಬೆಂಕಿಗೆ, ಕಾಂಗ್ರೆಸ್ ಪಾಳಯವೇ ತಿರುಗಿ ಬಿದ್ದಿದೆ. ಅನಂತ್ ಕುಮಾರ್ ವಿರುದ್ಧ ಕೈ ಯುದ್ಧ, ಮತ್ತೆ ಸಿದ್ದುಗೆ ಸವಾಲಾಗಿದೆ. ಇನ್ನು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದರಿಂದ ಕಾಂಗ್ರೆಸ್‌ ನಾಯಕರು ವೈಲೆಂಟ್ ಆಗಿದ್ದರೂ, ಬಿಜೆಪಿ ನಾಯಕರು ಮಾತ್ರ ಸೈಲೆಂಟ್ ಆಗಿದ್ದಾರೆ. ಹೀಗಾಗಿ, ಸಂಸದ ಅನಂತ್ ಹೆಗಡೆ ಏಕಾಂಗಿಯಾಗಿಯೇ ಯುದ್ಧಕ್ಕೆ ಸನ್ನದ್ಧರಾಗಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭಾ ಚುನಾವಣೆ ಹತ್ತಿರವಾಗ್ತಾ ಇದ್ದ ಹಾಗೇ ಮತ್ತೆ ತಮ್ಮ ಹಳೆ ಶೈಲಿಯಲ್ಲಿ ಆಕ್ಟೀವ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮಗನೆ ಅನ್ನೋ ಶಬ್ದ ಪ್ರಯೋಗಿಸಿದ ಬೆನ್ನಲ್ಲೇ ಅನಂತ್ ಕುಮಾರ್ ಹೆಗಡೆ ವರ್ಸಸ್ ಕಾಂಗ್ರೆಸ್ ಯುದ್ಧವೇ ಶುರುವಾಗಿದೆ. ಸಂಸದರ ಮೇಲೆ ಮುಗಿ ಬಿದ್ದ ಕಾಂಗ್ರೆಸ್ ಪಡೆ, ಸಂಸ್ಕಾರ ಹೀನ ಅನಂತ್ ಕುಮಾರ್ ಹೆಗಡೆ ಅನ್ನೋ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ವೈಲೆಂಟ್ ಆಗಿದ್ರೆ ಬಿಜೆಪಿ ಸೈಲೆಂಟ್ ಆಗಿದೆ. ಕೈ ಪಾಳಯದ ಪ್ರತಿಭಟನೆಗೆ ಜಗ್ಗದ ಸಂಸದ ಅನಂತ್ ಕುಮಾರ್ ಹೆಗಡೆ ಸಿದ್ದುಗೆ ಬಹಿರಂಗ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಕಣ್ಣಿಗೆ  ಗುರಿಯಾಗಿರುವ ಹಿಂದೂ ಫೈರ್‌ಬ್ರ್ಯಾಂಡ್ ಅನಂತಕುಮಾರ್ ಹೆಗಡೆ ಮತ್ತೆ ಸಿಡಿದ್ದೆದಿದ್ದಾರೆ. ಸಿಎಂ ವಿರುದ್ಧ  ಸಂಸ್ಕೃತಿ ಫೈಟ್ ಶುರುಮಾಡಿರೋ ಸಂಸದ ಬಹಿರಂಗವಾಗಿಯೇ ಚರ್ಚೆಗೆ ಬನ್ನಿ ಅಂತಾ ಪಂಥಹ್ವಾನ ನೀಡಿದ್ದಾರೆ. ಪ್ರಚೋದನಕಾರಿ ಭಾಷಣ ಅನ್ನೋ ವಿಚಾರಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ  ಎಫ್ ಐ ಆರ್ ದಾಖಲಾಗಿದೆ. ಏಕವಚನ ಪ್ರಯೋಗದ ಬಗ್ಗೆ ನಡೀತಿರೋ ರಾಜಕೀಯ ರಣರಂಗದ ರೋಚಕತೆ ಹೆಚ್ಚಾಗುತ್ತಿದೆ. ಸಿಎಂ ವಿರುದ್ಧ ಏಕವಚನ ಪ್ರಯೋಗ ಸೇರಿ ಪ್ರಚೋದನಕಾರಿ ಭಾಷಣ ವಿರುದ್ಧ ಸಂಸದರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೊಂದು ಪ್ರಕರಣದ ರಾಜಕೀಯ ರೋಚಕತೆ ಪಡೀತಾ ಇದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more