ಯತ್ನಾಳ್ ತಾಕತ್ತಿಗೆ ಸಿಎಂ ಬಿಎಸ್‌ವೈ ರಾಜಕೀಯ ಕಾರ್ಯದರ್ಶಿ ಸವಾಲ್!

Mar 21, 2021, 3:53 PM IST

ದಾವಣಗೆರೆ, (ಮಾ.21): ಸಿಎಂ ಬಿ.ಎಸ್​​​ ಯಡಿಯೂರಪ್ಪ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. 

ಇನ್ನೂ 400 ಸಿಡಿಗಳಿವೆ ಎಂದ ಯತ್ನಾಳ್‌: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ..!

ಸಿಎಂ ಬದಲಾವಣೆ ನೂರಕ್ಕೆ ನೂರರಷ್ಟು ಖಚಿತ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಶತಸಿದ್ದ ಎಂದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಯತ್ನಾಳ್ ತಾಕತ್ತಿಗೆ ಸವಾಲು ಹಾಕಿದ್ದಾರೆ.