ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜಿನಾಮೆ ಕೊಡಲಿ: ರೇಣುಕಾಚಾರ್ಯ ಆಗ್ರಹ

ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜಿನಾಮೆ ಕೊಡಲಿ: ರೇಣುಕಾಚಾರ್ಯ ಆಗ್ರಹ

Published : Jun 28, 2023, 06:48 PM IST

ರಾಜ್ಯದಲ್ಲಿ ಬಿಜೆಪಿ ಸೋಲಿನ ನೈತಿಕ ಹೊಣೆ ಹೊತ್ತು  ರಾಜ್ಯಾಧ್ಯಕ್ಷರು (ನಳೀನ್‌ ಕುಮಾರ್‌ ಕಟೀಲ್‌) ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ದಾವಣಗೆರೆ (ಜೂ.28): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಆದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷರು (ನಳೀನ್‌ ಕುಮಾರ್‌ ಕಟೀಲ್‌) ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋಲಿನ ಬೆನ್ನಲ್ಲೇ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರ ಪರವಾಗಿ ಮಾತನಾಡಿದರೆ ಅದು ಪಕ್ಷ ವಿರೋಧಿಯಾ? ಯಡಿಯೂರಪ್ಪ ನವರ ವಿರುದ್ಧವಾಗಿ ಮಾತನಾಡಿದರೆ ಅದು ಪಕ್ಷದ ಚಟುವಟಿಕೆಯಾ? ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಒಬ್ಬ ಹುಟ್ಟು ಹೋರಾಟಗಾರ. ನೂರಾರು ಹೋರಾಟಗಳನ್ನು ಮಾಡಿ ಜೈಲಿಗೆ ಹೋಗಿಬಂದವರು. ಅನೇಕ ಬಾರಿ ದೆಹಲಿಯಲ್ಲಿ ಹೇಳಿಬಂದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪ್ರಸ್ತುತ ವಿದ್ಯಮಾನಗಳ ಹತ್ತಾರು ಬಾರಿ ಹೇಳಿದ್ದೆನೆ. ಬಸವರಾಜ್ ಬೊಮ್ಮಾಯಿ ಕೈಗಳನ್ನು ಕಟ್ಟಿ ಹಾಕಿ ಅಧಿಕಾರ ಮಾಡಿಸಿದ್ದೀರಿ. ರೇಣುಕಾಚಾರ್ಯ ಸೋತರು ಎಂಬ ಹತಾಶೆಯಿಂದ ಮಾತನಾಡುತ್ತಿಲ್ಲ. ನಾನು ಸೋತಿಲ್ಲ, ಜನ 75 ಸಾವಿರ ಮತಗಳನ್ನು ಹಾಕಿದ್ದಾರೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಮೋದಿಯವರು ಪ್ರಧಾನಿಯಾಗಬೇಕು. ಮತ್ತೊಮ್ಮೆ ಆತ್ಮವಲೋಕನ ನಡೆದು ಬಿಜೆಪಿ ಹೊಸ ಹುಟ್ಟು ಪಡೆಯಬೇಕು ಎಂದು ಹೇಳಿದರು.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more