ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜಿನಾಮೆ ಕೊಡಲಿ: ರೇಣುಕಾಚಾರ್ಯ ಆಗ್ರಹ

ಬಿಜೆಪಿ ಸೋಲಿನ ಹೊಣೆಹೊತ್ತು ರಾಜ್ಯಾಧ್ಯಕ್ಷ ಕಟೀಲ್ ರಾಜಿನಾಮೆ ಕೊಡಲಿ: ರೇಣುಕಾಚಾರ್ಯ ಆಗ್ರಹ

Published : Jun 28, 2023, 06:48 PM IST

ರಾಜ್ಯದಲ್ಲಿ ಬಿಜೆಪಿ ಸೋಲಿನ ನೈತಿಕ ಹೊಣೆ ಹೊತ್ತು  ರಾಜ್ಯಾಧ್ಯಕ್ಷರು (ನಳೀನ್‌ ಕುಮಾರ್‌ ಕಟೀಲ್‌) ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ದಾವಣಗೆರೆ (ಜೂ.28): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಆದ್ದರಿಂದ ಬಿಜೆಪಿ ರಾಜ್ಯಾಧ್ಯಕ್ಷರು (ನಳೀನ್‌ ಕುಮಾರ್‌ ಕಟೀಲ್‌) ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಸೋತಿರುವ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋಲಿನ ಬೆನ್ನಲ್ಲೇ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಬುಧವಾರ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಯಾರ ಮೇಲೆ ಶಿಸ್ತು ಕ್ರಮ ಕೈಗೊಳ್ಳುತ್ತಾರೆ. ಯಡಿಯೂರಪ್ಪನವರ ಪರವಾಗಿ ಮಾತನಾಡಿದರೆ ಅದು ಪಕ್ಷ ವಿರೋಧಿಯಾ? ಯಡಿಯೂರಪ್ಪ ನವರ ವಿರುದ್ಧವಾಗಿ ಮಾತನಾಡಿದರೆ ಅದು ಪಕ್ಷದ ಚಟುವಟಿಕೆಯಾ? ಎಂದು ಹೇಳಿದ್ದಾರೆ. 

ಯಡಿಯೂರಪ್ಪ ಒಬ್ಬ ಹುಟ್ಟು ಹೋರಾಟಗಾರ. ನೂರಾರು ಹೋರಾಟಗಳನ್ನು ಮಾಡಿ ಜೈಲಿಗೆ ಹೋಗಿಬಂದವರು. ಅನೇಕ ಬಾರಿ ದೆಹಲಿಯಲ್ಲಿ ಹೇಳಿಬಂದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪ್ರಸ್ತುತ ವಿದ್ಯಮಾನಗಳ ಹತ್ತಾರು ಬಾರಿ ಹೇಳಿದ್ದೆನೆ. ಬಸವರಾಜ್ ಬೊಮ್ಮಾಯಿ ಕೈಗಳನ್ನು ಕಟ್ಟಿ ಹಾಕಿ ಅಧಿಕಾರ ಮಾಡಿಸಿದ್ದೀರಿ. ರೇಣುಕಾಚಾರ್ಯ ಸೋತರು ಎಂಬ ಹತಾಶೆಯಿಂದ ಮಾತನಾಡುತ್ತಿಲ್ಲ. ನಾನು ಸೋತಿಲ್ಲ, ಜನ 75 ಸಾವಿರ ಮತಗಳನ್ನು ಹಾಕಿದ್ದಾರೆ. ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಮೋದಿಯವರು ಪ್ರಧಾನಿಯಾಗಬೇಕು. ಮತ್ತೊಮ್ಮೆ ಆತ್ಮವಲೋಕನ ನಡೆದು ಬಿಜೆಪಿ ಹೊಸ ಹುಟ್ಟು ಪಡೆಯಬೇಕು ಎಂದು ಹೇಳಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more