ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

Published : Dec 18, 2024, 07:50 PM ISTUpdated : Dec 18, 2024, 07:51 PM IST

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟದಿಂದ ಹಿಂದೆ ಸರಿಯಲು ದೂರುದಾರ ಸ್ನೇಹಮಯಿಕೃಷ್ಣಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಪತ್ನಿಯ ಆಪ್ತ ಸಹಾಯಕ ಎಂದು ಹೇಳಿಕೊಂಡ ವ್ಯಕ್ತಿಯಿಂದ ಹಣದ ಆಮಿಷ ಬಂದಿದೆ ಎಂದು ತಿಳಿಸಿದ್ದಾರೆ. ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟ ವಿಚಾರದ ಬಗ್ಗೆ ದೂರುದಾರ ಸ್ನೇಹಮಯಿಕೃಷ್ಣ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಮುಡಾ ಪ್ರಕರಣದಿಂದ ಹಿಂದೆ ಸರಿಯಲು ನನಗೆ ಹಣದ ಆಮಿಷ ಒಡ್ಡಲಾಗಿದೆ. ಹರ್ಷ ಹಾಗೂ ಶ್ರೀನಿಧಿ ಎಂಬ ಇಬ್ಬರು ವ್ಯಕ್ತಿಗಳಿಂದ ಹಣದ ಆಮಿಷ ಬಂದಿದೆ. ಇನ್ನು ಹಣದ ಆಮಿಷ ಒಡ್ಡಿದ ಹರ್ಷ ಎನ್ನುವ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾರೆ. ಇದೇ ಡಿ.13 ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣವನ್ನ ಸಿಬಿಐಗೆ ವಹಿಸಬೇಕೆನ್ನುವ ಅರ್ಜಿ ವಾಪಸ್ ಪಡೆಯಿರಿ. ಲೋಕಾಯುಕ್ತ ಸಮಸ್ಯೆ ನಮಗೆ ಏನು ಸಮಸ್ಯೆ ಇಲ್ಲ. ಸಿಬಿಐ ಆದರೆ ನಮಗೆ ಸಮಸ್ಯೆ ಇದೆ. ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು ಹಿಡಿದುಕೊಂಡಿದ್ದಾರಂತೆ. ಆದರೆ, ಇದನ್ನ ನಾನು ನಿರಾಕರಿಸಿದೆ. ಡಿ.15 ರಂದು ಮನೆಗೆ ತೆರಳಿ ಮಗನ ಬಳಿಯಲ್ಲಿ ಇದೇ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಈಗಾಗಲೇ ಇನ್ನೊಬ್ಬ ಹೋರಾಟಗಾರನಿಗೆ 3 ಕೋಟಿ ರೂ. ಮಾತನಾಡಿ 1.5 ಕೋಟಿ ರೂ. ಕೊಟ್ಟಿದ್ದೇವೆ ಎಂದು ಹರ್ಷ ಹಣದ ಬ್ಯಾಗ್ ತೋರಿಸಿದ್ದಾನೆ. ಹಣದ ಆಮಿಷಕ್ಕೆ ನನ್ನ ಮಗ ಒಪ್ಪಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅನುದಾನ ಕೇಳಿದ ಶಾಸಕರಿಗೆ ಪಂಗನಾಮ; ಹಾರಿಕೆ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ!

ಇನ್ನು ಈಗಾಗಲೇ ಮನೆ ಬಳಿ ಬಂದ ವಿಡಿಯೋ ಹಾಗೂ ನನಗೆ ಹಣದ ಆಮಿಷ ಒಡ್ಡಲು ನನಗೆ ಫೋನ್ ಮಾಡಿದ ದಾಖಲೆ ಎಲ್ಲವುಗಳನ್ನು ಇಟ್ಟುಕೊಂಡು ನಿನ್ನೆ ಜಾರಿ ನಿರ್ದೇಶನಾಲಯಗೆ (ಇಡಿ) ದೂರು ಕೊಟ್ಟಿದ್ದೇನೆ. ಜೊತೆಗ, ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಇಂತಹ ಆಮಿಷಕ್ಕೆ ಒಪ್ಪುವುದಿಲ್ಲ. ನಾನು ಜೀವಂತ ಆಗಿರುವುದರೊಳಗೆ ಇದಕ್ಕೊಂದು ತಾರ್ಕಿಕ ಅಂತ್ಯ ಹಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more