ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!

Published : Dec 18, 2024, 07:50 PM ISTUpdated : Dec 18, 2024, 07:51 PM IST

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟದಿಂದ ಹಿಂದೆ ಸರಿಯಲು ದೂರುದಾರ ಸ್ನೇಹಮಯಿಕೃಷ್ಣಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿಎಂ ಪತ್ನಿಯ ಆಪ್ತ ಸಹಾಯಕ ಎಂದು ಹೇಳಿಕೊಂಡ ವ್ಯಕ್ತಿಯಿಂದ ಹಣದ ಆಮಿಷ ಬಂದಿದೆ ಎಂದು ತಿಳಿಸಿದ್ದಾರೆ. ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಹೋರಾಟ ವಿಚಾರದ ಬಗ್ಗೆ ದೂರುದಾರ ಸ್ನೇಹಮಯಿಕೃಷ್ಣ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಫೋಟಕ ಹೇಳಿಕೆಗಳನ್ನು ನೀಡಿದ್ದಾರೆ. ಈ ಮುಡಾ ಪ್ರಕರಣದಿಂದ ಹಿಂದೆ ಸರಿಯಲು ನನಗೆ ಹಣದ ಆಮಿಷ ಒಡ್ಡಲಾಗಿದೆ. ಹರ್ಷ ಹಾಗೂ ಶ್ರೀನಿಧಿ ಎಂಬ ಇಬ್ಬರು ವ್ಯಕ್ತಿಗಳಿಂದ ಹಣದ ಆಮಿಷ ಬಂದಿದೆ. ಇನ್ನು ಹಣದ ಆಮಿಷ ಒಡ್ಡಿದ ಹರ್ಷ ಎನ್ನುವ ವ್ಯಕ್ತಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಆಪ್ತ ಸಹಾಯಕ ಎಂದು ಹೇಳಿಕೊಂಡಿದ್ದಾರೆ. ಇದೇ ಡಿ.13 ರಂದು ಮುಡಾ ಬಳಿ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಪಾರ್ವತಮ್ಮ ಮಾನಸಿಕವಾಗಿ ನೊಂದಿದ್ದಾರೆ. ಪ್ರಕರಣವನ್ನ ಸಿಬಿಐಗೆ ವಹಿಸಬೇಕೆನ್ನುವ ಅರ್ಜಿ ವಾಪಸ್ ಪಡೆಯಿರಿ. ಲೋಕಾಯುಕ್ತ ಸಮಸ್ಯೆ ನಮಗೆ ಏನು ಸಮಸ್ಯೆ ಇಲ್ಲ. ಸಿಬಿಐ ಆದರೆ ನಮಗೆ ಸಮಸ್ಯೆ ಇದೆ. ನಿಮಗೆ ಎಷ್ಟು ಹಣ ಬೇಕು ಕೇಳಿ ನಾವು ಕೊಡುತ್ತೇವೆಂದು ಹರ್ಷ ಕಾಲು ಹಿಡಿದುಕೊಂಡಿದ್ದಾರಂತೆ. ಆದರೆ, ಇದನ್ನ ನಾನು ನಿರಾಕರಿಸಿದೆ. ಡಿ.15 ರಂದು ಮನೆಗೆ ತೆರಳಿ ಮಗನ ಬಳಿಯಲ್ಲಿ ಇದೇ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಈಗಾಗಲೇ ಇನ್ನೊಬ್ಬ ಹೋರಾಟಗಾರನಿಗೆ 3 ಕೋಟಿ ರೂ. ಮಾತನಾಡಿ 1.5 ಕೋಟಿ ರೂ. ಕೊಟ್ಟಿದ್ದೇವೆ ಎಂದು ಹರ್ಷ ಹಣದ ಬ್ಯಾಗ್ ತೋರಿಸಿದ್ದಾನೆ. ಹಣದ ಆಮಿಷಕ್ಕೆ ನನ್ನ ಮಗ ಒಪ್ಪಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅನುದಾನ ಕೇಳಿದ ಶಾಸಕರಿಗೆ ಪಂಗನಾಮ; ಹಾರಿಕೆ ಉತ್ತರ ಕೊಟ್ಟ ಸಿಎಂ ಸಿದ್ದರಾಮಯ್ಯ!

ಇನ್ನು ಈಗಾಗಲೇ ಮನೆ ಬಳಿ ಬಂದ ವಿಡಿಯೋ ಹಾಗೂ ನನಗೆ ಹಣದ ಆಮಿಷ ಒಡ್ಡಲು ನನಗೆ ಫೋನ್ ಮಾಡಿದ ದಾಖಲೆ ಎಲ್ಲವುಗಳನ್ನು ಇಟ್ಟುಕೊಂಡು ನಿನ್ನೆ ಜಾರಿ ನಿರ್ದೇಶನಾಲಯಗೆ (ಇಡಿ) ದೂರು ಕೊಟ್ಟಿದ್ದೇನೆ. ಜೊತೆಗ, ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಇಂತಹ ಆಮಿಷಕ್ಕೆ ಒಪ್ಪುವುದಿಲ್ಲ. ನಾನು ಜೀವಂತ ಆಗಿರುವುದರೊಳಗೆ ಇದಕ್ಕೊಂದು ತಾರ್ಕಿಕ ಅಂತ್ಯ ಹಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಹೇಳಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?