ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

ಮೋದಿ ನಾಲಾಯಕ್! ಮಲ್ಲಿಕಾರ್ಜುನ ಖರ್ಗೆ ಬೆನ್ನಲ್ಲೇ ವಿವಾದ ಸೃಷ್ಟಿಸಿದ ಮಗನ ಹೇಳಿಕೆ!

Published : May 01, 2023, 07:15 PM IST

ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಕಲಬುರಗಿ (ಮೇ 1): ಈಗಾಗಲೇ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ವಿಷ ಸರ್ಪ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈಗ ಅವರ ಪುತ್ರ ಶಾಸಕ ಪ್ರಿಯಾಂಕ ಖರ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು 'ನಾಲಾಯಕ್' ಎಂದು ಮೂದಲಿಸುವ ಮೂಲಕ ಮತ್ತೊಂದು ವಿವಾದವನ್ನು ಖರ್ಗೆ ಕುಟುಂಬದ ಮೈಮೇಲೆ ಎಳೆದುಕೊಂಡಿದ್ದಾರೆ.

ಈಗಾಗಲೇ ದೇಶದ ಪ್ರಧಾನಮಂತ್ರಿಗೆ ಅಪ್ಪ ವಿಷ ಸರ್ಪ ಎಮದು ಹೇಳಿದರೆ, ಈಗ ಮಗ ನಾಲಾಯಕ್ ಎಂದು ಹೇಳಿಕೆ ನೀಡಿದ್ದಾರೆ. ಸೋಮವಾರ ಬೆಳಗ್ಗೆ ಶಾಸಕ ಪ್ರಿಯಾಂಕ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಮೋದಿಯ ವಿರುದ್ಧ ಹರಿಹಾಯ್ದಿದ್ದಾರೆ. ಇತ್ತೀಚೆಗೆ ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ದರು? ಬಂಜಾರಾ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದರೆ, ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ಜೀವನ ನಡೆಯುತ್ತೆ? ದೇಶ ನಡೆಸೋನು ಮಾತ್ರವಲ್ಲ. ಮನೆಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ. ಆದರೆ, ಸುದ್ದಿಗೋಷ್ಠಿಯ ಕೊನೆಗೆ ನಾನು ಮೋದಿಗೆ ಹಾಗೆ ಅಂದಿಲ್ಲ. ನನಗೆ ವಯಕ್ತಿಕ ನಿಂದನೆಗಿಂತ ಅವರಿಂದ ಕೆಲವು ಪ್ರಶ್ನೆಗೆ ಉತ್ತರ ಮುಖ್ಯ ಎಂದು ಸಮಜಾಯಿಸಿ ನೀಡಲು ಯತ್ನಿಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more