ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

Published : Nov 07, 2023, 02:56 PM IST

ಮಧ್ಯಪ್ರದೇಶ ರಣರಂಗದಲ್ಲಿ ಪ್ರಧಾನಿ ಮೋದಿ ಸ್ಫೋಟಕ ಮಾತು..!
ತಿರುಗಿ ಬಿದ್ದ ಸಿದ್ದರಾಮಯ್ಯ.. ಮೋದಿ ವಿರುದ್ಧ ಟಗರು ಗುಟುರು..!
ಅಂದು "ಸೀದಾರುಪಯ್ಯ" ಅಂದಿದ್ದರು ಪ್ರಧಾನಿ ನರೇಂದ್ರ ಮೋದಿ..!

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ನಡುವಿನ ರಾಜಕೀಯ ಜಿದ್ದಾಜಿದ್ದಿ ಇವತ್ತು ನಿನ್ನೆಯದ್ದಲ್ಲ. ಇದು ಮೋದಿ ಪ್ರಧಾನಿಯಾದ ದಿನದಿಂದ ಶುರುವಾಗಿರೋ ಜಟಾಪಟಿ. ಕರ್ನಾಟಕಕ್ಕೆ ಬಂದಾಗ ಸಿದ್ದರಾಮಯ್ಯನವರ ವಿರುದ್ಧ ಮೋದಿ(Narendra Modi) ಅಬ್ಬರಿಸೋದು, ಮೋದಿ ಮಾತಿನೇಟಿಗೆ ಅಷ್ಟೇ ತೀಕ್ಷ್ಣವಾಗಿ ಸಿದ್ದರಾಮಯ್ಯ ತಿರುಗೇಟು ಕೊಡೋದು. ಇದನ್ನೆಲ್ಲಾ ಇಡೀ ರಾಜ್ಯವೇ ನೋಡಿದೆ. ಈಗ ಇಬ್ಬರ ಮಧ್ಯೆ ಶುರುವಾಗಿರೋದು ಮತ್ತೊಂದು ಸುತ್ತಿನ ಯುದ್ಧ. ಈ ಬಾರಿ ಸಿದ್ದರಾಮಯ್ಯನವ್ರಿಗೆ ದೂರದ ಮಧ್ಯಪ್ರದೇಶದಲ್ಲಿ(Madyapradesh) ಮೋದಿ ಟಕ್ಕರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರದ್ದು ಸುಲಿಗೆ ಸರ್ಕಾರ ಅಂತ ಕರೆದಿದ್ದಾರೆ. ಕರ್ನಾಟಕದ(Karnataka) ಸಿಎಂ ಮತ್ತು ಡಿಸಿಎಂ ಸೇರಿಕೊಂಡು ರಾಜ್ಯವನ್ನು ಸುಲಿಗೆ ಮಾಡ್ತಿದ್ದಾರೆ ಅಂತ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಸರ್ಕಾರದ ವಿರುದ್ಧ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ವಿರುದ್ಧ ಸುಲಿಗೆಯ ಆರೋಪ ಮಾಡಿರೋ ಪ್ರಧಾನಿ ಮೋದಿ ವಿರುದ್ಧ ಕೈ ಸರ್ಕಾರದ ಮಂತ್ರಿಗಳೂ ಕಿಡಿ ಕಾರಿದ್ದಾರೆ.

ಇದನ್ನೂ ವೀಕ್ಷಿಸಿ:  ಲಿಟಲ್ ಬಾಯ್, ಫ್ಯಾಟ್ ಮ್ಯಾನ್‌ಗಿಂತಾ 24 ಪಟ್ಟು ದೊಡ್ಡ ಬಾಂಬ್! ಬಿ61-13 ರಹಸ್ಯವೇನು..? ಏನಿದರ ಉದ್ದೇಶ..?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more