National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

National Flag Row: ಸಚಿವ ಈಶ್ವರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್, ಜೊತೆಗೊಂದು ಎಚ್ಚರಿಕೆ

Published : Feb 20, 2022, 03:05 PM IST

ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಸಚಿವ ಕೆ.ಎಸ್. ಈಶ್ವರಪ್ಪ ಅವರ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ  ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ತೀವ್ರ ಸ್ವರೂಪ ಪಡೆದುಕೊಂಡ ಈಶ್ವರಪ್ಪ ಮಾತು,ಅತ್ತ ಹೋರಾಟಕ್ಕೆ ಕಾಂಗ್ರೆಸ್ ಕರೆ, ಇತ್ತ ಬಿಜೆಪಿ ತುರ್ತು ಸಭೆ

ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ (Congress) ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.  ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸೌಧದ ಹೊರಗೂ ಹೋರಾಟಕ್ಕೆ ಕಾಂಗ್ರೆಸ್ ನಾಯಕರು (Congress Peotest) ಕರೆ ನೀಡಿದ್ದಾರೆ. ನಾಳೆ (ಫೆ.21) ರಾಜ್ಯಾದ್ಯಂತ ಈಶ್ವರಪ್ಪ (KS Eshwarappa) ವಿರುದ್ಧ ಪ್ರತಿಭಟನೆಗೆ (Protest) ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ತಾಲೂಕು ಕೇಂದ್ರ, ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಯಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದು ಕಿಡಿಕಾರಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more