RSS ಬಗ್ಗೆ ದೇವೇಗೌಡ ಒಳ್ಳೆ ಅಭಿಪ್ರಾಯ ಹೇಳಿದ್ರು: ಸಿಟಿ ರವಿ ಮಾತು ಸುಳ್ಳು

Oct 8, 2021, 7:43 PM IST

ಬೆಂಗಳೂರು, (ಅ.08): ನಾನು ಆರ್‌ಎಸ್‌ಎಸ್ (RSS) ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು. ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು ಎಂದು ಎಚ್‌ಡಿ ದೇವೇಗೌಡ (HD Devegowda) ಅವರು ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

'ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕಿಂತ ಆರ್‌ಎಸ್ಸೆಸ್‌ ಆಡಳಿತ ಹೆಚ್ಚು'

ಬೆಂಗಳೂರಿನಲ್ಲಿ (Bengaluru) ಇಂದು (ಅ.08) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ವರಿಷ್ಠ (JDS Supremo)ದೇವೇಗೌಡ, ಆರ್.ಎಸ್.ಎಸ್ ಬಗ್ಗೆ ದೇವೇಗೌಡರು ಒಳ್ಳೆಯ ಅಭಿಪ್ರಾಯ ಹೇಳಿದ್ರು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು.. ನಾನು ಆರ್‌ಎಸ್‌ಎಸ್ ಬಗ್ಗೆ ಹೊಗಳಿದ್ದೇನೆ ಎನ್ನುವುದು ಸುಳ್ಳು ಅಡ್ವಾಣಿ‌ ಬಂದಾಗ ನಾವು ಸಮಾಲೋಚನೆ ಮಾಡಿದ್ದೆವು. ಎಮರ್ಜೆನ್ಸಿ ಸಮಯದಲ್ಲಿ ಜೈಲಿಗೆ ಹೋಗಿದ್ದರ ಬಗ್ಗೆ ಮಾತನಾಡಿದ್ದೆವು ಎಂದು ಸ್ಪಷ್ಟನೆ ಕೊಟ್ಟರು.