ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

Published : Jul 03, 2023, 12:00 PM IST

ಕ್ಲೈಮ್ಯಾಕ್ಸ್ ಹಂತ ತಲುಪಿದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು..!
ವಿಪಕ್ಷ ನಾಯಕನ ಆಯ್ಕೆ ಜವಾಬ್ದಾರಿ ಹೊತ್ತ ರಾಜಾಹುಲಿ ಬಿಎಸ್ವೈ..!
ವಿಪಕ್ಷ ನಾಯಕರ ಮುಂದಿರುವ ಭಾರೀ ಸವಾಲುಗಳು ಏನೇನು..?

ಸದನದಲ್ಲಿ ಸಿದ್ದು ಪಡೆ ಎದುರಿಸಲು ಬಿಜೆಪಿಗೆ ಸಾರಥಿಯೇ ಸಿಕ್ಕಿಲ್ಲ. 50 ದಿನಗಳು ಕಳೆದ್ರೂ ವಿಪಕ್ಷ ನಾಯಕರ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕುವ ಪ್ರಭಲ ಸಾರಥಿಯನ್ನು ಆಯ್ಕೆ ಮಾಡೋದು ಬಿಜೆಪಿ ಹೈ ಕಮಾಂಡ್‌ಗೆ ದೊಡ್ಡ ಸವಾಲಾಗಿತ್ತು. ಅದ್ರಂತೆ ವಿಪಕ್ಷ ನಾಯಕರ ಹುಡುಕಾಟದಲ್ಲಿದ್ದ ಬಿಜೆಪಿ ಹೈಕಾಮಾಂಡ್ ತಲೆ ಕೆಡಿಸಿಕೊಂಡಿದೆ. ದೆಹಲಿಯಲ್ಲಿ ನಡೆದ ಹೈ ವೋಲ್ಟೆಜ್ ಮೀಟಿಂಗ್‌ನಲ್ಲಿ ರಾಜಾಹುಲಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದ ಬಳಿಕ ವಿಪಕ್ಷ ನಾಯಕರ  ಆಯ್ಕೆ ಆಗಲಿದೆ ಎನ್ನಲಾಗ್ತಿತ್ತು. ಆದ್ರೆ ಇಂದು ರಾಜ್ಯಕ್ಕೆ ವೀಕ್ಷಕರು ಬರಲಿದ್ದು, ಅವರು ಬಂದ ಬಳಿಕ ವರದಿ ನೋಡಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಲಿದೆ. ಮಾಜಿ ಸಿಎಂ ಬೊಮ್ಮಾಯಿ ಅವರೇ ವಿಧಾನಸಭೆಯ ವಿಪಕ್ಷ ನಾಯಕರಾಗ್ತಾರೋ? ಅಥವಾ ಅಚ್ಚರಿ ಪ್ರಯೋಗವನ್ನು ಹೈಕಮಾಂಡ್ ಕೈಗೊಳ್ಳಲಿದೆಯೋ ಎಂಬ ಕುತೂಹಲ ಇನ್ನೂ ಇದೆ. ವಿಪಕ್ಷ ಲೀಡರ್ ಸ್ಥಾನದಲ್ಲಿ ಕೂರಲು ಕೇಸರಿ ಪಡೆಯಲ್ಲಿ ರೇಸ್ ನಡೆಯುತ್ತಿದ್ದರೂ ಲೋಕಸಭೆ ಚುನಾವಣೆ ಹಾಗೂ ಪಕ್ಷದ ಭವಿಷ್ಯದ ದೃಷ್ಟಿಯನ್ನ ಗಮನದಲ್ಲಿ ಇಟ್ಟುಕೊಂಡು, ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನ ಹುಡುಕಾಟ ನಡೆಸಿ ವಿಪಕ್ಷ ನಾಯಕ ಯಾರಾಗ್ಬೇಕು ಅನ್ನೋ ನಿರ್ಧಾರವನ್ನ ಬಿಜೆಪಿ ಅಳೆದು ತೂಗಿ ಮಾಡಲಿದೆ.

ಇದನ್ನೂ ವೀಕ್ಷಿಸಿ:  ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more