ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

ಪ್ರತಿಪಕ್ಷ ನಾಯಕರ ರೇಸ್‌ನಲ್ಲಿದ್ದವರಿಗೆ ಬಿಗ್ ಶಾಕ್: ವೀಕ್ಷಕರ ವರದಿ ಬಳಿಕ ಆಯ್ಕೆ, ಯಾರಾಗ್ತಾರೆ ನಾಯಕ ?

Published : Jul 03, 2023, 12:00 PM IST

ಕ್ಲೈಮ್ಯಾಕ್ಸ್ ಹಂತ ತಲುಪಿದ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟು..!
ವಿಪಕ್ಷ ನಾಯಕನ ಆಯ್ಕೆ ಜವಾಬ್ದಾರಿ ಹೊತ್ತ ರಾಜಾಹುಲಿ ಬಿಎಸ್ವೈ..!
ವಿಪಕ್ಷ ನಾಯಕರ ಮುಂದಿರುವ ಭಾರೀ ಸವಾಲುಗಳು ಏನೇನು..?

ಸದನದಲ್ಲಿ ಸಿದ್ದು ಪಡೆ ಎದುರಿಸಲು ಬಿಜೆಪಿಗೆ ಸಾರಥಿಯೇ ಸಿಕ್ಕಿಲ್ಲ. 50 ದಿನಗಳು ಕಳೆದ್ರೂ ವಿಪಕ್ಷ ನಾಯಕರ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಸಿದ್ದು ಸರ್ಕಾರವನ್ನು ಕಟ್ಟಿ ಹಾಕುವ ಪ್ರಭಲ ಸಾರಥಿಯನ್ನು ಆಯ್ಕೆ ಮಾಡೋದು ಬಿಜೆಪಿ ಹೈ ಕಮಾಂಡ್‌ಗೆ ದೊಡ್ಡ ಸವಾಲಾಗಿತ್ತು. ಅದ್ರಂತೆ ವಿಪಕ್ಷ ನಾಯಕರ ಹುಡುಕಾಟದಲ್ಲಿದ್ದ ಬಿಜೆಪಿ ಹೈಕಾಮಾಂಡ್ ತಲೆ ಕೆಡಿಸಿಕೊಂಡಿದೆ. ದೆಹಲಿಯಲ್ಲಿ ನಡೆದ ಹೈ ವೋಲ್ಟೆಜ್ ಮೀಟಿಂಗ್‌ನಲ್ಲಿ ರಾಜಾಹುಲಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿದ ಬಳಿಕ ವಿಪಕ್ಷ ನಾಯಕರ  ಆಯ್ಕೆ ಆಗಲಿದೆ ಎನ್ನಲಾಗ್ತಿತ್ತು. ಆದ್ರೆ ಇಂದು ರಾಜ್ಯಕ್ಕೆ ವೀಕ್ಷಕರು ಬರಲಿದ್ದು, ಅವರು ಬಂದ ಬಳಿಕ ವರದಿ ನೋಡಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಲಿದೆ. ಮಾಜಿ ಸಿಎಂ ಬೊಮ್ಮಾಯಿ ಅವರೇ ವಿಧಾನಸಭೆಯ ವಿಪಕ್ಷ ನಾಯಕರಾಗ್ತಾರೋ? ಅಥವಾ ಅಚ್ಚರಿ ಪ್ರಯೋಗವನ್ನು ಹೈಕಮಾಂಡ್ ಕೈಗೊಳ್ಳಲಿದೆಯೋ ಎಂಬ ಕುತೂಹಲ ಇನ್ನೂ ಇದೆ. ವಿಪಕ್ಷ ಲೀಡರ್ ಸ್ಥಾನದಲ್ಲಿ ಕೂರಲು ಕೇಸರಿ ಪಡೆಯಲ್ಲಿ ರೇಸ್ ನಡೆಯುತ್ತಿದ್ದರೂ ಲೋಕಸಭೆ ಚುನಾವಣೆ ಹಾಗೂ ಪಕ್ಷದ ಭವಿಷ್ಯದ ದೃಷ್ಟಿಯನ್ನ ಗಮನದಲ್ಲಿ ಇಟ್ಟುಕೊಂಡು, ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನ ಹುಡುಕಾಟ ನಡೆಸಿ ವಿಪಕ್ಷ ನಾಯಕ ಯಾರಾಗ್ಬೇಕು ಅನ್ನೋ ನಿರ್ಧಾರವನ್ನ ಬಿಜೆಪಿ ಅಳೆದು ತೂಗಿ ಮಾಡಲಿದೆ.

ಇದನ್ನೂ ವೀಕ್ಷಿಸಿ:  ಶಿವರಾಮ್‌ ಹೆಬ್ಬಾರ್‌, ಸುನಿಲ್‌ ನಾಯ್ಕ್‌ಗೆ ಸಂಕಷ್ಟ: ಆರೋಪ ಸಾಬೀತಾದ್ರೆ 6 ವರ್ಷ ಚುನಾವಣಾ ಸ್ಪರ್ಧೆಗೆ ನಿರ್ಬಂಧ ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more