News Hour: ಬಿಜೆಪಿ, ಕಾಂಗ್ರೆಸ್‌ ನಡುವೆ 'ಸೈಲೆಂಟ್‌' ರಾಜಕೀಯ!

News Hour: ಬಿಜೆಪಿ, ಕಾಂಗ್ರೆಸ್‌ ನಡುವೆ 'ಸೈಲೆಂಟ್‌' ರಾಜಕೀಯ!

Published : Nov 29, 2022, 10:50 PM ISTUpdated : Nov 29, 2022, 10:56 PM IST

ಸೈಲೆಂಟ್‌ ಸುನೀಲನ ವಿಚಾರವಾಗಿ ರಾಜ್ಯ ರಾಜಕಾರಣ ವೈಲೆಂಟ್‌ ಆಗಿದೆ. ಬಿಜೆಪಿ ಪಕ್ಷಕ್ಕೆ ಸೇರಿ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎನ್ನುವ ಬಯಕೆಯಲ್ಲಿದ್ದ ಸೈಲೆಂಟ್ ಸುನೀಲ ಅದಕ್ಕಾಗಿ ರಕ್ತದಾನದ ಶಿಬಿರದ ಹೆಸರಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು.

ಬೆಂಗಳೂರು (ನ.29): ರೌಡಿ ಶೀಟರ್‌ ಸೈಲೆಂಟ್‌ ಸುನೀಲನ ರಾಜಕೀಯದ ಆಸೆಗೆ ಬಹುತೇಕ ತಣ್ಣೀರು ಬಿದ್ದಿದೆ. ರಕ್ತದಾನದ ಶಿಬಿರದ ಹೆಸರಲ್ಲಿ ಸೈಲೆಂಟ್‌ ಸುನೀಲ ಇತ್ತೀಚೆಗೆ ತನ್ನ ಶಕ್ತಿ ಪ್ರದರ್ಶನ ಮಾಡಿದ್ದರು. ಬಿಜೆಪಿಯ ಪ್ರಭಾವಿ ಸಚಿವರು ಹಾಗೂ ಸಂಸದರನ್ನು ಅವರು ಕಾರ್ಯಕ್ರಮಕ್ಕ ಆಹ್ವಾನ ಮಾಡಿದ್ದರು.

ಭಾನುವಾರ ಚಾಮರಾಜಪೇಟೆಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್‌ ಕೂಡ ಹಾಜರಿದ್ದರು. ಈಗ ಈ ವಿಚಾರವೀಗ ರಾಜಕೀಯದ ದಾಳವಾಗಿ ಪರಿಣಮಿಸಿದೆ. ಫೈಟರ್‌ ರವಿ ಬಳಿಕ ಈಗ ಸೈಲೆಂಟ್‌ ಸುನೀಲ, ರೌಡಿ ಶೀಟರ್‌ಗಳನ್ನು ಬಿಜೆಪಿ ಸೇರಿಸಿಕೊಳ್ಳುತ್ತಿದೆ ಎಂದು ಆರೋಪ ಮಾಡಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ತಿರುಗೇಟು ನೀಡಿದೆ.

ಮಂಗಳೂರಿನ 3 ದೇವಸ್ಥಾನ ಸೇರಿ 6 ಸ್ಥಳಗಳಲ್ಲಿ ಸ್ಫೋಟಕ್ಕೆ ಸಂಚು, ತನಿಖೆಯಲ್ಲಿ ಬಹಿರಂಗ!

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಯಾವುದೇ ಕಾರಣಕ್ಕೂ ಸೈಲೆಂಟ್‌ ಸುನೀಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಅಪರಾಧ ಹಿನ್ನಲೆಯುಳ್ಳವರ ಜೊತೆ ಬಿಜೆಪಿ ಎಂದಿಗೂ ಇರೋದಿಲ್ಲ. ಸೈಲೆಂಟ್‌ ಸುನೀಲನ ಜೊತೆ ವೇದಿಕೆ ಹಂಚಿಕೊಂಡಿದ್ದ ವಿಚಾರವಾಗಿ ವರದಿ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more