ಒಂದಾಗುತ್ತಾ ಹಳೇದೋಸ್ತಿ, ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ ಜೆಡಿಎಸ್!

ಒಂದಾಗುತ್ತಾ ಹಳೇದೋಸ್ತಿ, ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ ಜೆಡಿಎಸ್!

Published : Jun 08, 2022, 11:11 PM IST

ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಕಾವು ಜೋರಾಗಿದೆ. ಇದರ ನಡುವೆ ಬಿಜೆಪಿಯನ್ನು ಅಧಿಕಾರದಿಂದ ತಡೆಯುವ ನಿಟ್ಟಿನಲ್ಲಿ ಕುಮಾರಸ್ವಾಮಿ ತಮ್ಮ ಹಳೆಯ ದೋಸ್ತಿ ಕಾಂಗ್ರೆಸ್ ಗೆ ಓಪನ್ ಆಫರ್ ಅನ್ನು ನೀಡಿರುವುದು ಬುಧವಾರ ಜೋರು ಸುದ್ದಿ ಮಾಡಿತ್ತು.
 

ಬೆಂಗಳೂರು (ಜೂನ್ 8): ರಾಜ್ಯಸಭೆ ಹಣಾಹಣಿಗೆ (Rajya sabha Polls) ರಾಜ್ಯ ಸಿದ್ಧವಾಗಿದೆ. ಜೆಡಿಎಸ್ (JDS) ಹಾಗೂ ಕಾಂಗ್ರೆಸ್ (Congress) ನಡುವೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿದ್ದು, ಕುಪೇಂದ್ರ ರೆಡ್ಡಿ (Kupendra Reddy) ಯಾವ ಕ್ಷಣದಲ್ಲಿ ಬೇಕಾದರೂ ಕಣದಿಂದ ಹಿಂದೆ ಸರಿಯಬಹುದು ಎಂದು ಸುದ್ದಿಯಾಗಿತ್ತು. ಆದರೆ, ಈ ಸುದ್ದಿ ಕುಮಾರಸ್ವಾಮಿ ಹಾಗೂ ರೇವಣ್ಣನವರಿಗೆ ಸಿಟ್ಟು ತರಿಸಿತ್ತು.

ಇನ್ನೊಂದೆಡೆ, ಬಿಜೆಪಿ ಸರ್ಕಾರವನ್ನು ತೆಗೆಯಲು ಕುಮಾರಸ್ವಾಮಿ ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ್ದಾರೆ. "ಇವತ್ತಿನಿಂದಲೇ ಎಲ್ಲವನ್ನೂ ಮರೆತುಬಿಡುತ್ತೇನೆ. ನಾನು ಎಲ್ಲದಕ್ಕೂ ತಯಾರಿದ್ದೇನೆ. ಕಾಂಗ್ರೆಸ್ ನಾಯಕರನ್ನು ಕಳಿಸುತ್ತೇನೆ ಎಂದವರು ಇಲ್ಲಿಯವರೆಗೂ ಕಳಿಸಿಲ್ಲ.ನಾಳೆ ಮಧ್ಯಾಹ್ನದ ಒಳಗಾಗಿ ಎಲ್ಲವೂ ತಿಳಿಯುತ್ತದೆ' ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಅದರೊಂದಿಗೆ ಕೊನೇ ಕ್ಷಣದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆಗಬಹುದು ಎನ್ನುವ ಸೂಚನೆಯನ್ನೂ ರವಾನಿಸಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಇನ್ನೊಂದೆಡೆ ಪಠ್ಯಪುಸ್ತಕ ವಿವಾದದಲ್ಲಿ ಮತ್ತೊಂದಿಷ್ಟು ಬೆಳವಣಿಗೆಯಾಗಿದೆ. ಮುಂಬೈ ದಾಳಿ ವೇಳೆ ಹುತಾತ್ಮರಾದ ಉಣ್ಣಿಕೃಷ್ಣನ್ ಅವರ ಪಠ್ಯವನ್ನು ಬರಗೂರು ರಾಮಚಂದ್ರಪ್ಪನವರ ಸಮಿತಿ ಕೈಬಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಬರಗೂರು ಸಮಿತಿ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ ಎನ್ನುವುದು ತಿಳಿದುಬಂದಿದೆ.ಪಠ್ಯ ಪರಿಷ್ಕರಣೆಯಲ್ಲಿ ಯಾವುದೇ ಲೋಪವಿದ್ದರೆ ಸರಿಮಾಡುತ್ತೇವೆ. ನಮ್ಮ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿದ್ದರೆ ಸರಿಮಾಡುತ್ತೇವೆ, ಆದರೆ ಕುವೆಂಪು ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಎಂದಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more