ಒಂದಾಗುತ್ತಾ ಹಳೇದೋಸ್ತಿ, ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ ಜೆಡಿಎಸ್!

ಒಂದಾಗುತ್ತಾ ಹಳೇದೋಸ್ತಿ, ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ ಜೆಡಿಎಸ್!

Published : Jun 08, 2022, 11:11 PM IST

ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಕಾವು ಜೋರಾಗಿದೆ. ಇದರ ನಡುವೆ ಬಿಜೆಪಿಯನ್ನು ಅಧಿಕಾರದಿಂದ ತಡೆಯುವ ನಿಟ್ಟಿನಲ್ಲಿ ಕುಮಾರಸ್ವಾಮಿ ತಮ್ಮ ಹಳೆಯ ದೋಸ್ತಿ ಕಾಂಗ್ರೆಸ್ ಗೆ ಓಪನ್ ಆಫರ್ ಅನ್ನು ನೀಡಿರುವುದು ಬುಧವಾರ ಜೋರು ಸುದ್ದಿ ಮಾಡಿತ್ತು.
 

ಬೆಂಗಳೂರು (ಜೂನ್ 8): ರಾಜ್ಯಸಭೆ ಹಣಾಹಣಿಗೆ (Rajya sabha Polls) ರಾಜ್ಯ ಸಿದ್ಧವಾಗಿದೆ. ಜೆಡಿಎಸ್ (JDS) ಹಾಗೂ ಕಾಂಗ್ರೆಸ್ (Congress) ನಡುವೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿದ್ದು, ಕುಪೇಂದ್ರ ರೆಡ್ಡಿ (Kupendra Reddy) ಯಾವ ಕ್ಷಣದಲ್ಲಿ ಬೇಕಾದರೂ ಕಣದಿಂದ ಹಿಂದೆ ಸರಿಯಬಹುದು ಎಂದು ಸುದ್ದಿಯಾಗಿತ್ತು. ಆದರೆ, ಈ ಸುದ್ದಿ ಕುಮಾರಸ್ವಾಮಿ ಹಾಗೂ ರೇವಣ್ಣನವರಿಗೆ ಸಿಟ್ಟು ತರಿಸಿತ್ತು.

ಇನ್ನೊಂದೆಡೆ, ಬಿಜೆಪಿ ಸರ್ಕಾರವನ್ನು ತೆಗೆಯಲು ಕುಮಾರಸ್ವಾಮಿ ಕಾಂಗ್ರೆಸ್ ಗೆ ಓಪನ್ ಆಫರ್ ನೀಡಿದ್ದಾರೆ. "ಇವತ್ತಿನಿಂದಲೇ ಎಲ್ಲವನ್ನೂ ಮರೆತುಬಿಡುತ್ತೇನೆ. ನಾನು ಎಲ್ಲದಕ್ಕೂ ತಯಾರಿದ್ದೇನೆ. ಕಾಂಗ್ರೆಸ್ ನಾಯಕರನ್ನು ಕಳಿಸುತ್ತೇನೆ ಎಂದವರು ಇಲ್ಲಿಯವರೆಗೂ ಕಳಿಸಿಲ್ಲ.ನಾಳೆ ಮಧ್ಯಾಹ್ನದ ಒಳಗಾಗಿ ಎಲ್ಲವೂ ತಿಳಿಯುತ್ತದೆ' ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಅದರೊಂದಿಗೆ ಕೊನೇ ಕ್ಷಣದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆಗಬಹುದು ಎನ್ನುವ ಸೂಚನೆಯನ್ನೂ ರವಾನಿಸಿದ್ದಾರೆ.

'ಇವತ್ತು ದೇವಸ್ಥಾನದಲ್ಲಿ ನಾನು ಡಿಸೈಡ್​ ಮಾಡಿ ಹೋಗ್ತೇನೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗೇ ಆಗ್ತಾರೆ'

ಇನ್ನೊಂದೆಡೆ ಪಠ್ಯಪುಸ್ತಕ ವಿವಾದದಲ್ಲಿ ಮತ್ತೊಂದಿಷ್ಟು ಬೆಳವಣಿಗೆಯಾಗಿದೆ. ಮುಂಬೈ ದಾಳಿ ವೇಳೆ ಹುತಾತ್ಮರಾದ ಉಣ್ಣಿಕೃಷ್ಣನ್ ಅವರ ಪಠ್ಯವನ್ನು ಬರಗೂರು ರಾಮಚಂದ್ರಪ್ಪನವರ ಸಮಿತಿ ಕೈಬಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಬರಗೂರು ಸಮಿತಿ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ನೀಡಿರಲಿಲ್ಲ ಎನ್ನುವುದು ತಿಳಿದುಬಂದಿದೆ.ಪಠ್ಯ ಪರಿಷ್ಕರಣೆಯಲ್ಲಿ ಯಾವುದೇ ಲೋಪವಿದ್ದರೆ ಸರಿಮಾಡುತ್ತೇವೆ. ನಮ್ಮ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿದ್ದರೆ ಸರಿಮಾಡುತ್ತೇವೆ, ಆದರೆ ಕುವೆಂಪು ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ ಎಂದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more