Jul 4, 2019, 8:16 PM IST
ಬೆಂಗಳೂರು(ಜು.04): ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರ ಸ್ವಾಮಿ ಅವರನ್ನು ನೇಮಿಸಲಾಗಿದೆ. ಜೆಪಿ ಭವನದಲ್ಲಿ ಎಚ್.ಡಿ.ದೇವೇಗೌಡರು ನಿಖಿಲ್ ಅವರ ಹೆಸರನ್ನು ಘೋಷಿಸಿ, ಹಾರ ಹಾಕಿ ಶುಭಹಾರೈಸಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಆಗಿ ಮಾತನಾಡಿದ ನಿಖಿಲ್, ಈ ಹುದ್ದೆ ಲಭಿಸಲಿದೆ ಎಂಬ ನಿರೀಕ್ಷೆ ಇರಲಿಲ್ಲ ಎಂದು ಹೇಳಿದರು. ಪಕ್ಷದ ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಈ ವೇಳೆ ನಿಖಿಲ್ ಭರವಸೆ ವ್ಯಕ್ತಪಡಿಸಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...