ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ, ಎಲ್ಲಾ ಜಾತಿ- ಧರ್ಮದವರಿಗೆ ನನ್ನ ಅಭಿನಂದನೆಗಳು: ಹಾಲಾಡಿ ಶ್ರೀನಿವಾಸ ಶೆಟ್ಟಿ

ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ, ಎಲ್ಲಾ ಜಾತಿ- ಧರ್ಮದವರಿಗೆ ನನ್ನ ಅಭಿನಂದನೆಗಳು: ಹಾಲಾಡಿ ಶ್ರೀನಿವಾಸ ಶೆಟ್ಟಿ

Published : Apr 06, 2023, 03:47 PM IST

ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದು ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಒಮ್ಮೆಯೂ ಸಚಿವರಾಗಲಿಲ್ಲ. ಆದರೆ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆಯನ್ನೇ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ.

ಉಡುಪಿ (ಏ.06): ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದು ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಿಜೆಪಿಯಿಂದ 5 ಬಾರಿ ಶಾಸಕರಾದರು, ಮಂತ್ರಿ ಸ್ಥಾನ ಹಾಲಾಡಿಯವರಿಗೆ ಸಿಗಲಿಲ್ಲ. ಸ್ಥಿತಪ್ರಜ್ಞ ರಾಜಕಾರಣ ನಡೆಸಿರುವ ಹಾಲಾಡಿ, ಕುಂದಾಪುರದ ವಾಜಪೇಯಿ ಅಂತಲೇ ಪ್ರಸಿದ್ಧರಾಗಿದ್ದರು. ಈಗ ಅವರ ಅನಿರೀಕ್ಷಿತ ನಿರ್ಧಾರ, ಕರಾವಳಿಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಲಾಡಿ ಅವರ ಜೊತೆ ನಮ್ಮ ಉಡುಪಿ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ. 

ಕುಂದಾಪುರದ ಜಾತಿ ಮತ ಧರ್ಮ ಮರೆತು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ. ಎಲ್ಲಾ ಜಾತಿ ಮತ ಧರ್ಮಕ್ಕೆ ನನ್ನ ಅಭಿನಂದನೆ. ಪಕ್ಷೇತರವಾಗಿ ನಿಂತಾಗಲೂ ಭಾವನೆಗೆ ಸ್ಪಂದಿಸಿ ಅಭೂತಪೂರ್ವ ಜಯ ಸಿಕ್ಕಿತು. 4 ಬಾರಿ ಬಿಜೆಪಿ, ಒಮ್ಮೆ ಪಕ್ಷೇತರ ನಿಂತಾಗ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನಾನು 6 ತಿಂಗಳ ಹಿಂದೆಯೇ ಈ ನಿರ್ಧಾರ ಮಾಡಿದ್ದೆನು. ನೀತಿ ಸಂಹಿತೆ ಜಾರಿಯ ದಿನದ ತನಕ ಕೆಲಸ ಮಾಡಿದ್ದೇನೆ. ಮುಂದೆ ಬಿಜೆಪಿಯನ್ನು ಬೆಂಬಲಿಸಿ, ಅಭ್ಯರ್ಥಿ ಗೆಲ್ಲಿಸಬೇಕು ಎಂದು ನಿರ್ಣಯ ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಿರಣ್‌ ಕೂಡ್ಗಿ ನಮಗೂ ಆಪ್ತ:  ಇನ್ನು ಕುಂದಾಪುರದ ಅಭ್ಯರ್ಥಿ ಯಾರೆಂದು ರಾಷ್ಟ್ರೀಯ ಮಟ್ಟದಲ್ಲಿ ನಿರ್ಣಯ ಆಗಬೇಕು. ಕಿರಣ್ ಕೊಡ್ಗಿ ನನ್ನ ತಮ್ಮನ ಆಪ್ತ, ತಂದೆಯ ಕಾಲದಿಂದ ಕುಟುಂಬದ ಆಪ್ತರು. ಬಿಜೆಪಿಯ ಅಭ್ಯರ್ಥಿಯನ್ನು ನಾನು ಬೆಂಬಲಿಸುತ್ತೇನೆ, ಪ್ರಕಟಣೆಯಲ್ಲೂ ದಾಖಲಿಸಿದ್ದೇನೆ. ರಾಜಕೀಯ ಜೀವನದ 25 ವರ್ಷ ಒಂದೇ ಮನಸ್ಸಿನಿಂದ ಎಲ್ಲಾ ಚುನಾವಣೆಯಲ್ಲಿ ಕೆಲಸ ಪರಿಶುದ್ಧತೆ ಸಹನೆ ಒಳ್ಳೆತನಕ್ಕೆ ಮೆಚ್ಚಿದ್ದೇವೆ. ನಮ್ಮ ನಡುವೆ ಒಂದು ಕೂದಲೆಳೆ ವೈಮನಸ್ಸು ಇಲ್ಲ. ಕಿರಣ್ ಕೊಡ್ಗಿಗೆ ಅವಕಾಶ ಕೊಟ್ಟರೆ ನಾನು ಖುಷಿ ಪಡುತ್ತೇನೆ. ನಾನು ದುಡುಕಿನ ನಿರ್ಧಾರ ತೆಗೆದಕೊಂಡಿಲ್ಲ ಮನಸ್ಸು ಚಂಚಲವಾಗಿಲ್ಲ. ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಲು ಹೇಳಿದ್ದರಿಂದ ಮಾತನಾಡಿದೆ. ಜಾಗೃತ ಮನಸ್ಸಿನಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?