ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ, ಎಲ್ಲಾ ಜಾತಿ- ಧರ್ಮದವರಿಗೆ ನನ್ನ ಅಭಿನಂದನೆಗಳು: ಹಾಲಾಡಿ ಶ್ರೀನಿವಾಸ ಶೆಟ್ಟಿ

ದುಡುಕಿನ ನಿರ್ಧಾರ ತೆಗೆದುಕೊಂಡಿಲ್ಲ, ಎಲ್ಲಾ ಜಾತಿ- ಧರ್ಮದವರಿಗೆ ನನ್ನ ಅಭಿನಂದನೆಗಳು: ಹಾಲಾಡಿ ಶ್ರೀನಿವಾಸ ಶೆಟ್ಟಿ

Published : Apr 06, 2023, 03:47 PM IST

ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದು ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಒಮ್ಮೆಯೂ ಸಚಿವರಾಗಲಿಲ್ಲ. ಆದರೆ, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆಯನ್ನೇ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ.

ಉಡುಪಿ (ಏ.06): ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದು ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಿಜೆಪಿಯಿಂದ 5 ಬಾರಿ ಶಾಸಕರಾದರು, ಮಂತ್ರಿ ಸ್ಥಾನ ಹಾಲಾಡಿಯವರಿಗೆ ಸಿಗಲಿಲ್ಲ. ಸ್ಥಿತಪ್ರಜ್ಞ ರಾಜಕಾರಣ ನಡೆಸಿರುವ ಹಾಲಾಡಿ, ಕುಂದಾಪುರದ ವಾಜಪೇಯಿ ಅಂತಲೇ ಪ್ರಸಿದ್ಧರಾಗಿದ್ದರು. ಈಗ ಅವರ ಅನಿರೀಕ್ಷಿತ ನಿರ್ಧಾರ, ಕರಾವಳಿಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಲಾಡಿ ಅವರ ಜೊತೆ ನಮ್ಮ ಉಡುಪಿ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ. 

ಕುಂದಾಪುರದ ಜಾತಿ ಮತ ಧರ್ಮ ಮರೆತು ಸಂಪೂರ್ಣ ಬೆಂಬಲ ಕೊಟ್ಟಿದ್ದಾರೆ. ಎಲ್ಲಾ ಜಾತಿ ಮತ ಧರ್ಮಕ್ಕೆ ನನ್ನ ಅಭಿನಂದನೆ. ಪಕ್ಷೇತರವಾಗಿ ನಿಂತಾಗಲೂ ಭಾವನೆಗೆ ಸ್ಪಂದಿಸಿ ಅಭೂತಪೂರ್ವ ಜಯ ಸಿಕ್ಕಿತು. 4 ಬಾರಿ ಬಿಜೆಪಿ, ಒಮ್ಮೆ ಪಕ್ಷೇತರ ನಿಂತಾಗ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ. ನಾನು 6 ತಿಂಗಳ ಹಿಂದೆಯೇ ಈ ನಿರ್ಧಾರ ಮಾಡಿದ್ದೆನು. ನೀತಿ ಸಂಹಿತೆ ಜಾರಿಯ ದಿನದ ತನಕ ಕೆಲಸ ಮಾಡಿದ್ದೇನೆ. ಮುಂದೆ ಬಿಜೆಪಿಯನ್ನು ಬೆಂಬಲಿಸಿ, ಅಭ್ಯರ್ಥಿ ಗೆಲ್ಲಿಸಬೇಕು ಎಂದು ನಿರ್ಣಯ ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಕಿರಣ್‌ ಕೂಡ್ಗಿ ನಮಗೂ ಆಪ್ತ:  ಇನ್ನು ಕುಂದಾಪುರದ ಅಭ್ಯರ್ಥಿ ಯಾರೆಂದು ರಾಷ್ಟ್ರೀಯ ಮಟ್ಟದಲ್ಲಿ ನಿರ್ಣಯ ಆಗಬೇಕು. ಕಿರಣ್ ಕೊಡ್ಗಿ ನನ್ನ ತಮ್ಮನ ಆಪ್ತ, ತಂದೆಯ ಕಾಲದಿಂದ ಕುಟುಂಬದ ಆಪ್ತರು. ಬಿಜೆಪಿಯ ಅಭ್ಯರ್ಥಿಯನ್ನು ನಾನು ಬೆಂಬಲಿಸುತ್ತೇನೆ, ಪ್ರಕಟಣೆಯಲ್ಲೂ ದಾಖಲಿಸಿದ್ದೇನೆ. ರಾಜಕೀಯ ಜೀವನದ 25 ವರ್ಷ ಒಂದೇ ಮನಸ್ಸಿನಿಂದ ಎಲ್ಲಾ ಚುನಾವಣೆಯಲ್ಲಿ ಕೆಲಸ ಪರಿಶುದ್ಧತೆ ಸಹನೆ ಒಳ್ಳೆತನಕ್ಕೆ ಮೆಚ್ಚಿದ್ದೇವೆ. ನಮ್ಮ ನಡುವೆ ಒಂದು ಕೂದಲೆಳೆ ವೈಮನಸ್ಸು ಇಲ್ಲ. ಕಿರಣ್ ಕೊಡ್ಗಿಗೆ ಅವಕಾಶ ಕೊಟ್ಟರೆ ನಾನು ಖುಷಿ ಪಡುತ್ತೇನೆ. ನಾನು ದುಡುಕಿನ ನಿರ್ಧಾರ ತೆಗೆದಕೊಂಡಿಲ್ಲ ಮನಸ್ಸು ಚಂಚಲವಾಗಿಲ್ಲ. ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಲು ಹೇಳಿದ್ದರಿಂದ ಮಾತನಾಡಿದೆ. ಜಾಗೃತ ಮನಸ್ಸಿನಿಂದಲೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!