ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

Published : Mar 08, 2023, 06:01 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ.

ಬೆಂಗಳೂರು (ಮಾ.08): ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ ಹಂಚಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ