ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

ಯಾರೂ ಡಿಕೆಶಿ ಮಾತಿಗೆ ಬಲಿಯಾಗಲ್ಲ, ಹೋಗುವವರನ್ನು ಗೌರವಯುತವಾಗಿ ಕಳಿಸ್ತೇವೆ: ಯಡಿಯೂರಪ್ಪ

Published : Mar 08, 2023, 06:01 PM IST

ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ.

ಬೆಂಗಳೂರು (ಮಾ.08): ಬಿಜೆಪಿಯಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇದೆ. ಯಾರೊಬ್ಬರೂ ಡಿ.ಕೆ. ಶಿವಕುಮಾರ್ ಮ ಆತಿಗೆ ಬಲಿಯಾಗಲ್ಲ. ಆದರೆ, ಹೋಗುವವರನ್ನು ನಾವು ಗೌರವಯುತವಾಗಿ ಕಳಿಸಿಕೊಡುತ್ತೇವೆ. ಇನ್ನು ಸಾಕಷ್ಟು ಜನರು ಬರಲು ಸಿದ್ಧರಾಗಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಬಿಜೆಪಿ ಟಿಕೆಟ್‌ ಹಂಚಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಪರ ಅಲೆ ಜೋರಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿಯುತ್ತೇವೆ ಎಂದರು.

ಟಿಕೆಟ್‌ ಹಂಚಿಕೆ ವಿಷಯದಲ್ಲಿಯೂ ಕಟ್ಟುನಿಟ್ಟಿನ ಮಾನದಂಡಗಳನ್ನು ಅನುಸರಿಸಲಾಗುವುದು. ಟಿಕೆಟ್‌ ಹಂಚಿಕೆಯಲ್ಲಿ ಗುಜರಾತ್‌ ಮಾದರಿ ಅನ್ನೋದಕ್ಕಿಂತ ಪಕ್ಷದ ಹೈಕಮಾಂಡ್‌ ಹಾಲಿ ಶಾಸಕರೆಲ್ಲರ ಚಲನ ವಲನ ಗಮನಿಸುತ್ತಿದೆ. ಇದನ್ನಾಧರಿಸಿ ಹೇಳೋದಾದಲ್ಲಿ ಹಾಲಿ ನಾಲ್ಕೈದು ಶಾಸಕರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಉಮೇದುವಾರರ ಮೊದಲ ಪಟ್ಟಿ ಶೀಘ್ರವೇ ಹೊರಬೀಳುತ್ತದೆ. ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಚುನಾವಣೆ ಮುಗಿದ ಬಳಿಕ ನಡೆಯುವ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ನಿರ್ಧಾರವಾಗಲಿದೆ ಎಂದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!