ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಂಡಾಯ! ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶ..!

Published : Nov 21, 2023, 11:08 AM IST

ಬಿಜೆಪಿಯಲ್ಲಿ ಹುದ್ದೆ ಸಿಗದ ಸಮುದಾಯಗಳ ಪರಿಗಣನೆ ಸಾಧ್ಯತೆ
ಎಲ್ಲಾ ಸಮುದಾಯಗಳಿಗೂ ನ್ಯಾಯ ದೊರಕಿಸಿಕೊಡಲು ಚಿಂತನೆ
ಪ್ರಮುಖವಾಗಿ ಒಬಿಸಿ ಹಾಗೂ ದಲಿತರಿಗೆ ಸ್ಥಾನ ಕೊಡಲು ಪ್ಲ್ಯಾನ್

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಯ್ಕೆ ಬೆನ್ನಲ್ಲೇ ಬಿಜೆಪಿಯಲ್ಲಿ(BJP) ಬಂಡಾಯ ಶುರುವಾಗಿದ್ದು, ಬಹಿರಂಗವಾಗೇ BJP ಹಿರಿಯ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲವೆಂದು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ನಾಯಕರ ಆಕ್ರೋಶವನ್ನ ಗಂಭೀರವಾಗಿ ಬಿಜೆಪಿ ಪರಿಗಣಿಸಿದಂತೆ ಕಾಣುತ್ತಿದೆ. ಉಳಿದ 5 ಸ್ಥಾನಗಳನ್ನ ಉತ್ತರ ಕರ್ನಾಟಕ(Uttara Karnataka) ಭಾಗಕ್ಕೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಬಿಜೆಪಿ ಪಾಳಯದಲ್ಲಿ ಗಂಭೀರವಾದ ಚಿಂತನೆ ನಡೆಸಲಾಗುತ್ತಿದೆ. ವಿಧಾನಸಭೆ ಉಪನಾಯಕ(Legislative Assembly Deputy Leader) ಸ್ಥಾನಕ್ಕೆ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿದೆ. ಅಶೋಕ್‌ಗೆ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಬೆಲ್ಲದ್, ಇದೀಗ ಬೆಲ್ಲದ್‌ಗೆ ಉಪನಾಯಕ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಪರಿಷತ್ ವಿಪಕ್ಷ ನಾಯಕ ಸ್ಥಾನ ಉತ್ತರ ಕರ್ನಾಟಕ ಭಾಗಕ್ಕೆ? ಉತ್ತರ ಕರ್ನಾಟಕದ ನಾಯಕರಿಗೆ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಹಿರಿಯರ ಬಂಡಾಯದ ಬಳಿಕ ರಘುನಾಥ್ರಾವ್ ಮಲ್ಕಾಪುರೆ ರೇಸ್‌ನಲ್ಲಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಎಲ್ಲಾ ಹುದ್ದೆ ಭರ್ತಿಗೆ ಸಭೆ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿ ಅಧಿವೇಶನಕ್ಕೂ ಮುನ್ನವೇ ಎಲ್ಲಾ ಹುದ್ದೆಗಳು ಭರ್ತಿಯಾಗುವ ಸಾಧ್ಯತೆ ಇದೆ. ಶೀಘ್ರದಲ್ಲೇ ಸಭೆ ಮಾಡಿ ಹೈಕಮಾಂಡ್‌ಗೆ ಪಟ್ಟಿ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ವೀಕ್ಷಿಸಿ:  ನಿಗಮ ಮಂಡಳಿ‌ ನೇಮಕ ವಿಚಾರದಲ್ಲಿ ಸಿಎಂ ವರ್ಸಸ್ ಡಿಸಿಎಂ..ಇಂದು ಅಂತಿಮಗೊಳ್ಳುತ್ತಾ ನೇಮಕ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more