ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

Published : Aug 23, 2023, 03:52 PM IST

ಬಿಜೆಪಿಯಿಂದ ಯಾರೆಲ್ಲ ಹೊರ ನಡೆಯಲು ಸಿದ್ಧರಾಗಿದ್ದಾರೆ..? 
ಘರ್ ವಾಪ್ಸಿಗೆ ತನ್ವೀರ್ ಸೇಠ್.. ಭೀಮಣ್ಣ ನಾಯ್ಕ್ ವಿರೋಧ
ಘರ್ ವಾಪ್ಸಿಗೆ ಮಧು ಬಂಗಾರಪ್ಪನವರ ವಿರೋಧವೂ ಇದೆಯಾ..?

ರಾಜ್ಯ ರಾಜಕಾರಣದಲ್ಲಿ ಸಧ್ಯದ ಬಿಸಿ ಬಿಸಿ ಸುದ್ದಿ ಏನು ಅನ್ನೋದು ಎಲ್ರಿಗೋ ಗೊತ್ತಿದೆ. ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ(operation hastha) ಕೈ ಹಾಕಿದೆ. ಮನೆ ಬಿಟ್ಟು ಹೋದವರನ್ನು ಮತ್ತೆ ತಾಂಬುಲ ಕೊಟ್ಟು ಮನೆ ತುಂಬಿಸಿಕೊಳ್ಳೋದ್ರಲ್ಲಿ, ರಾಜ್ಯ ಕಾಂಗ್ರೆಸ್(Congress) ಪಕ್ಷ ಮುಂದಾಗಿದೆ. ಘರ್ ವಾಪ್ಸಿ ಆಪರೇಷನ್‌ನಲ್ಲಿ ಕಾಂಗ್ರೆಸ್ ಆ್ಯಕ್ವಿವ್ ಆಗಿರೋದನ್ನು ಕಂಡು ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳಿಗೆ ನಡುಕ ಶುರುವಾಗಿದೆ. ಆದ್ರೆ, ಆಪರೇಷನ್ ಹಸ್ತಕ್ಕೆ ಕುದ್ದು ಕಾಂಗ್ರೆಸ್ ಪಕ್ಷದಲ್ಲೇ ವಿರೋಧ ಕೇಳಿ ಬರ್ತಿದೆ. ಸದ್ಯ ರಾಜ ರಾಜಕಾರಣದಲ್ಲಿ ಹೆಚ್ಚು ಕೇಳಿ ಬರ್ತಿರೋದು ಈ ಎರಡು ವಾಖ್ಯಗಳು. ಘರ್ ವಾಪ್ಸಿ ಮತ್ತು ಆಪರೇಷನ್ ಹಸ್ತ. ಅಂದು ಕಾಂಗ್ರೆಸ್ ಪಕ್ಷ ತೊರೆದಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಕೆಲವರು ಕಾಂಗ್ರೆಸ್ ಸೇರುವುದು ಈಗಾಗ್ಲೇ ಖಚಿತವಾಗಿದೆ. ಇನ್ನು ಯಾರೆಲ್ಲ ಸೇರಲಿದ್ದಾರೆ ಅನ್ನೋದು ತಿಳಿಯಬೇಕಿದೆ. ಈಗಾಗ್ಲೇ ಯಶವಂತಪುರ ಕ್ಷೇತ್ರದ ಶಾಸಕ, ಎಸ್ ಟಿ ಸೋಮಶೇಖರ್, ಇನ್ನು ಕಾಂಗ್ರೆಸ್ ಸೇರುವ ಮುನ್ನವೇ ಅವರ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ. ಹೀಗೆ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯ ಜೋರಾಗಿನೇ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ನಡುಕ ಶುರುವಾಗಿದೆ. ಕಾಂಗ್ರೆಸ್‌ನ ಈ ನಡೆ, ಬಿಜೆಪಿ ಪಕ್ಷಕ್ಕಂತೂ, ಅವರ ಬಾಣವೇ ಅವರಿಗೆ ತಿರುಗಿದಂತಾಗುತ್ತಿದೆ. ಇನ್ನು ಈ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಜೆಡಿಎಸ್ ಅಂತೂ ಕಂಗೆಟ್ಟು ಹೋಗಿದೆ. ಆದ್ರೆ, ಅಚ್ಚರಿ ಏನ್ ಗೊತ್ತಾ? ಈ ಘರ್ ವಾಪ್ಸಿಗೆ ಖುದ್ದು ಕಾಂಗ್ರೆಸ್ ಪಕ್ಷದಲ್ಲೇ ಅನೇಕ ನಾಯಕರಿಂದ ವಿರೋಧ ಕೇಳಿ ಬರ್ತಾಯಿದೆ. 

ಇದನ್ನೂ ವೀಕ್ಷಿಸಿ: ಚಂದ್ರನ ಅಂಗಳದಲ್ಲಿ ಆಟವಾಡಲು ವಿಕ್ರಮ ಸಿದ್ಧ: ಭಾರತ ಸಾಧಿಸಿದ್ದು ಹೇಗೆ ಯಾರೂ ಮಾಡದ ದಾಖಲೆ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more