ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

ವಿರೋಧದ ಮಧ್ಯೆನೂ ಘರ್ ವಾಪ್ಸಿ ಮಾಡ್ತಿದ್ದಾರಾ ಡಿಕೆಶಿ ? ರಾಜೀನಾಮೆ ಮಾತುಗಳಾಡಿದ್ದೇಕೆ ತನ್ವೀರ್ ಸೇಠ್..?

Published : Aug 23, 2023, 03:52 PM IST

ಬಿಜೆಪಿಯಿಂದ ಯಾರೆಲ್ಲ ಹೊರ ನಡೆಯಲು ಸಿದ್ಧರಾಗಿದ್ದಾರೆ..? 
ಘರ್ ವಾಪ್ಸಿಗೆ ತನ್ವೀರ್ ಸೇಠ್.. ಭೀಮಣ್ಣ ನಾಯ್ಕ್ ವಿರೋಧ
ಘರ್ ವಾಪ್ಸಿಗೆ ಮಧು ಬಂಗಾರಪ್ಪನವರ ವಿರೋಧವೂ ಇದೆಯಾ..?

ರಾಜ್ಯ ರಾಜಕಾರಣದಲ್ಲಿ ಸಧ್ಯದ ಬಿಸಿ ಬಿಸಿ ಸುದ್ದಿ ಏನು ಅನ್ನೋದು ಎಲ್ರಿಗೋ ಗೊತ್ತಿದೆ. ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ(operation hastha) ಕೈ ಹಾಕಿದೆ. ಮನೆ ಬಿಟ್ಟು ಹೋದವರನ್ನು ಮತ್ತೆ ತಾಂಬುಲ ಕೊಟ್ಟು ಮನೆ ತುಂಬಿಸಿಕೊಳ್ಳೋದ್ರಲ್ಲಿ, ರಾಜ್ಯ ಕಾಂಗ್ರೆಸ್(Congress) ಪಕ್ಷ ಮುಂದಾಗಿದೆ. ಘರ್ ವಾಪ್ಸಿ ಆಪರೇಷನ್‌ನಲ್ಲಿ ಕಾಂಗ್ರೆಸ್ ಆ್ಯಕ್ವಿವ್ ಆಗಿರೋದನ್ನು ಕಂಡು ಬಿಜೆಪಿ(BJP) ಮತ್ತು ಜೆಡಿಎಸ್(JDS) ಪಕ್ಷಗಳಿಗೆ ನಡುಕ ಶುರುವಾಗಿದೆ. ಆದ್ರೆ, ಆಪರೇಷನ್ ಹಸ್ತಕ್ಕೆ ಕುದ್ದು ಕಾಂಗ್ರೆಸ್ ಪಕ್ಷದಲ್ಲೇ ವಿರೋಧ ಕೇಳಿ ಬರ್ತಿದೆ. ಸದ್ಯ ರಾಜ ರಾಜಕಾರಣದಲ್ಲಿ ಹೆಚ್ಚು ಕೇಳಿ ಬರ್ತಿರೋದು ಈ ಎರಡು ವಾಖ್ಯಗಳು. ಘರ್ ವಾಪ್ಸಿ ಮತ್ತು ಆಪರೇಷನ್ ಹಸ್ತ. ಅಂದು ಕಾಂಗ್ರೆಸ್ ಪಕ್ಷ ತೊರೆದಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದಾರೆ. ಕೆಲವರು ಕಾಂಗ್ರೆಸ್ ಸೇರುವುದು ಈಗಾಗ್ಲೇ ಖಚಿತವಾಗಿದೆ. ಇನ್ನು ಯಾರೆಲ್ಲ ಸೇರಲಿದ್ದಾರೆ ಅನ್ನೋದು ತಿಳಿಯಬೇಕಿದೆ. ಈಗಾಗ್ಲೇ ಯಶವಂತಪುರ ಕ್ಷೇತ್ರದ ಶಾಸಕ, ಎಸ್ ಟಿ ಸೋಮಶೇಖರ್, ಇನ್ನು ಕಾಂಗ್ರೆಸ್ ಸೇರುವ ಮುನ್ನವೇ ಅವರ ಬೆಂಬಲಿಗರು ಕಾಂಗ್ರೆಸ್ ಸೇರಿದ್ದಾರೆ. ಹೀಗೆ ರಾಜ್ಯದಲ್ಲಿ ಆಪರೇಷನ್ ಹಸ್ತ ಕಾರ್ಯ ಜೋರಾಗಿನೇ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ, ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ನಡುಕ ಶುರುವಾಗಿದೆ. ಕಾಂಗ್ರೆಸ್‌ನ ಈ ನಡೆ, ಬಿಜೆಪಿ ಪಕ್ಷಕ್ಕಂತೂ, ಅವರ ಬಾಣವೇ ಅವರಿಗೆ ತಿರುಗಿದಂತಾಗುತ್ತಿದೆ. ಇನ್ನು ಈ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಜೆಡಿಎಸ್ ಅಂತೂ ಕಂಗೆಟ್ಟು ಹೋಗಿದೆ. ಆದ್ರೆ, ಅಚ್ಚರಿ ಏನ್ ಗೊತ್ತಾ? ಈ ಘರ್ ವಾಪ್ಸಿಗೆ ಖುದ್ದು ಕಾಂಗ್ರೆಸ್ ಪಕ್ಷದಲ್ಲೇ ಅನೇಕ ನಾಯಕರಿಂದ ವಿರೋಧ ಕೇಳಿ ಬರ್ತಾಯಿದೆ. 

ಇದನ್ನೂ ವೀಕ್ಷಿಸಿ: ಚಂದ್ರನ ಅಂಗಳದಲ್ಲಿ ಆಟವಾಡಲು ವಿಕ್ರಮ ಸಿದ್ಧ: ಭಾರತ ಸಾಧಿಸಿದ್ದು ಹೇಗೆ ಯಾರೂ ಮಾಡದ ದಾಖಲೆ ?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more