ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

Published : Jul 31, 2022, 04:19 PM ISTUpdated : Jul 31, 2022, 04:22 PM IST

ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ

ನರೇಂದ್ರ ಮೋದಿ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸ್ತಾ ಇದ್ದಾರೆ. ಬೆಲೆ ಏರಿಕೆ  ವಿಚಾರಕ್ಕೆ ಮೋದಿ ಜನಾಕ್ರೋಶಕ್ಕೂ ಒಳಗಾಗಿದ್ದಾರೆ. ಆದ್ರೆ ಈ ಕೋಪ ತಾಪ ಎಲ್ಲಾ ತಾತ್ಕಾಲಿಕವಾ ಅನ್ನೋ ಪ್ರಶ್ನೆ ಮೂಡುವ ರೀತಿ ಸಮೀಕ್ಷೆಯೊಂದು ವರದಿ ನೀಡಿದೆ.  ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಯುಪಿಎ ಮೈತ್ರಿಕೂಟ ಕೇವಲ 97 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಇತರೆ ಪ್ರಾದೇಶಿಕ ಪಕ್ಷಗಳು, ಪಕ್ಷೇತರರು 84 ಸ್ಥಾನ ಗೆಲ್ಲಲಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

‘ಇಂಡಿಯಾ ಟೀವಿ’ ನಡೆಸಿದ ‘ವಾಯ್ಸ್ ಆಫ್‌ ದ ನೇಷನ್‌’ ಸಮೀಕ್ಷೆಯಲ್ಲಿ ಈ ಅಂಕಿ ಅಂಶಗಳಿವೆ. ಜು.11ರಿಂದ 24ರ ಅವಧಿಯಲ್ಲಿ ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 136ರಲ್ಲಿ 34000 ಜನರನ್ನು ಸಂದರ್ಶಿಸಿ ಸಮೀಕ್ಷೆ ವರದಿ ತಯಾರಿಸಲಾಗಿದೆ. ಸಮೀಕ್ಷೆ ಅನ್ವಯ ಎನ್‌ಡಿಎ ಶೇ.41, ಯುಪಿಎ ಶೇ.28 ಮತ್ತು ಇತರರು ಶೇ.31ರಷ್ಟುಮತ ಪಡೆದುಕೊಳ್ಳಲಿದ್ದಾರೆ.

 ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಬೇಕು ಅಂತ ಕಾಂಗ್ರೆಸ್ ಸರ್ಕಸ್ ಮಾಡುತ್ತಲೇ ಇದೆ. ಆದ್ರೆ ಅದೊಂದು ಸಂಕಲ್ಪ ಆಗ್ತಾನೆ ಇಲ್ಲಾ.. ಮೋದಿಯನ್ನ ಸೋಲಿಸೋಕೆ ಒಂದಿಷ್ಟು ಅಂಶಗಳು ಎದುರಾಳಿಗಳ ಕೈಲಿ ಇದ್ದೇ ಇದೆ. ಏನದು..? ಇಲ್ಲಿದೆ ನೋಡಿ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more