ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

Published : Jul 31, 2022, 04:19 PM ISTUpdated : Jul 31, 2022, 04:22 PM IST

ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ

ನರೇಂದ್ರ ಮೋದಿ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸ್ತಾ ಇದ್ದಾರೆ. ಬೆಲೆ ಏರಿಕೆ  ವಿಚಾರಕ್ಕೆ ಮೋದಿ ಜನಾಕ್ರೋಶಕ್ಕೂ ಒಳಗಾಗಿದ್ದಾರೆ. ಆದ್ರೆ ಈ ಕೋಪ ತಾಪ ಎಲ್ಲಾ ತಾತ್ಕಾಲಿಕವಾ ಅನ್ನೋ ಪ್ರಶ್ನೆ ಮೂಡುವ ರೀತಿ ಸಮೀಕ್ಷೆಯೊಂದು ವರದಿ ನೀಡಿದೆ.  ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಯುಪಿಎ ಮೈತ್ರಿಕೂಟ ಕೇವಲ 97 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಇತರೆ ಪ್ರಾದೇಶಿಕ ಪಕ್ಷಗಳು, ಪಕ್ಷೇತರರು 84 ಸ್ಥಾನ ಗೆಲ್ಲಲಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

‘ಇಂಡಿಯಾ ಟೀವಿ’ ನಡೆಸಿದ ‘ವಾಯ್ಸ್ ಆಫ್‌ ದ ನೇಷನ್‌’ ಸಮೀಕ್ಷೆಯಲ್ಲಿ ಈ ಅಂಕಿ ಅಂಶಗಳಿವೆ. ಜು.11ರಿಂದ 24ರ ಅವಧಿಯಲ್ಲಿ ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 136ರಲ್ಲಿ 34000 ಜನರನ್ನು ಸಂದರ್ಶಿಸಿ ಸಮೀಕ್ಷೆ ವರದಿ ತಯಾರಿಸಲಾಗಿದೆ. ಸಮೀಕ್ಷೆ ಅನ್ವಯ ಎನ್‌ಡಿಎ ಶೇ.41, ಯುಪಿಎ ಶೇ.28 ಮತ್ತು ಇತರರು ಶೇ.31ರಷ್ಟುಮತ ಪಡೆದುಕೊಳ್ಳಲಿದ್ದಾರೆ.

 ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಬೇಕು ಅಂತ ಕಾಂಗ್ರೆಸ್ ಸರ್ಕಸ್ ಮಾಡುತ್ತಲೇ ಇದೆ. ಆದ್ರೆ ಅದೊಂದು ಸಂಕಲ್ಪ ಆಗ್ತಾನೆ ಇಲ್ಲಾ.. ಮೋದಿಯನ್ನ ಸೋಲಿಸೋಕೆ ಒಂದಿಷ್ಟು ಅಂಶಗಳು ಎದುರಾಳಿಗಳ ಕೈಲಿ ಇದ್ದೇ ಇದೆ. ಏನದು..? ಇಲ್ಲಿದೆ ನೋಡಿ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more