Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Published : Oct 27, 2022, 09:53 PM IST

Minority PM: ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿ ಆಗಿದ್ದೇ ಆಗಿದ್ದು, ಭಾರತದಲ್ಲಿ ರಾಜಕೀಯದಾಟ ಶುರುವಾಗಿದೆ. ಬ್ರಿಟನ್‌ನಂತೆ ನಮ್ಮ ದೇಶದಲ್ಲಿ ಅಲ್ಪಸಂಖ್ಯಾತ ವ್ಯಕ್ತಿ ಪಿಎಂ ಆಗೋದು ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌ಗೆ, ಬಿಜೆಪಿ ಕೂಡ ದಿಟ್ಟ ತಿರುಗೇಟು ನೀಡಿತ್ತು.

ಬೆಂಗಳೂರು (ಅ. 27): ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ದೇಶದಲ್ಲಿ ವಿರೋಧ ಪಕ್ಷಗಳಲ್ಲಿ ತಳಮಳ ಶುರುವಾಗಿದೆ. ರಿಷಿ ಸುನಕ್‌ ಅವರು ಜನಾಂಗೀಯ ಅಲ್ಪಸಂಖ್ಯಾತರು. ಬ್ರಿಟನ್‌ನಲ್ಲಿ ಕೇವಲ ಶೇ.3ರಷ್ಟಿರುವ ಹಿಂದು ಸಮುದಾಯದವರು. ಅವರಿಗೆ ಬ್ರಿಟನ್‌ನಲ್ಲಿ ಪ್ರಧಾನಿ ಹುದ್ದೆ ಸಿಕ್ಕಿದೆ, ಈ ವಿಚಾರದಲ್ಲಿ ಭಾರತ ಕಲಿಯೋದ್ಯಾವಾಗ ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡಿದ್ದವು.

ಅದರರ್ಥ, ಅಲ್ಪಸಂಖ್ಯಾತ ವ್ಯಕ್ತಿ ಭಾರತದಲ್ಲಿ ಪ್ರಧಾನಿ ಆಗೋದು ಯಾವಾಗ ಎಂದು ಮಾಜಿ ಸಚಿವ ಪಿ ಚಿದಂಬರಂ, ಶಶಿ ತರೂರ್‌, ಮೆಹಬೂಬಾ ಮುಫ್ತಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತೀಕ್ಷ್ಣ ಉತ್ತರ ನೀಡಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಮನಮೋಹನ್‌ ಸಿಂಗ್‌ 10 ವರ್ಷ ಪ್ರಧಾನಿ ಆಗಿದ್ದರು. ಅಬ್ದುಲ್‌ ಕಲಾಂ 5 ವರ್ಷ ರಾಷ್ಟ್ರಪತಿಯಾಗಿದ್ದರು ಎನ್ನುವ ಲಿಸ್ಟ್‌ಗಳನ್ನೇ ನೀಡಿದೆ.

UK Prime Minister: ಬ್ರಿಟನ್‌ನಲ್ಲಿ ಇನ್ಮುಂದೆ ಕರ್ನಾಟಕದ ಅಳಿಯನ ದರ್ಬಾರ್‌..!

ಈಗ ಮತ್ತೆ ವರಸೆ ಬದಲಾಯಿಸಿರುವ ಶಶಿ ತರೂರ್‌, ವಿಸಿಬಲ್‌ ಮೈನಾರಿಟಿಯ ಪಿಎಂ ಕೇಳಿದ್ದಾಗಿ ಹೇಳಿದ್ದಾರೆ. ಅದರರ್ಥ, ನೋಡಿದ ತಕ್ಷಣ ಕಾಣ ಸಿಗುವ ಅಲ್ಪಸಂಖ್ಯಾತ ಅಂದರೆ ಮುಸ್ಲಿಂ ವ್ಯಕ್ತಿ ಪ್ರಧಾನಿ ಆಗುವುದು ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ. 'ಒಬ್ಬ ಮುಸ್ಲಿಂ, ಒಬ್ಬ ಕ್ರಿಶ್ಚಿಯನ್‌ ಪ್ರಧಾನಿಯಾಗುವುದನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more