Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Published : Oct 27, 2022, 09:53 PM IST

Minority PM: ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿ ಆಗಿದ್ದೇ ಆಗಿದ್ದು, ಭಾರತದಲ್ಲಿ ರಾಜಕೀಯದಾಟ ಶುರುವಾಗಿದೆ. ಬ್ರಿಟನ್‌ನಂತೆ ನಮ್ಮ ದೇಶದಲ್ಲಿ ಅಲ್ಪಸಂಖ್ಯಾತ ವ್ಯಕ್ತಿ ಪಿಎಂ ಆಗೋದು ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌ಗೆ, ಬಿಜೆಪಿ ಕೂಡ ದಿಟ್ಟ ತಿರುಗೇಟು ನೀಡಿತ್ತು.

ಬೆಂಗಳೂರು (ಅ. 27): ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ದೇಶದಲ್ಲಿ ವಿರೋಧ ಪಕ್ಷಗಳಲ್ಲಿ ತಳಮಳ ಶುರುವಾಗಿದೆ. ರಿಷಿ ಸುನಕ್‌ ಅವರು ಜನಾಂಗೀಯ ಅಲ್ಪಸಂಖ್ಯಾತರು. ಬ್ರಿಟನ್‌ನಲ್ಲಿ ಕೇವಲ ಶೇ.3ರಷ್ಟಿರುವ ಹಿಂದು ಸಮುದಾಯದವರು. ಅವರಿಗೆ ಬ್ರಿಟನ್‌ನಲ್ಲಿ ಪ್ರಧಾನಿ ಹುದ್ದೆ ಸಿಕ್ಕಿದೆ, ಈ ವಿಚಾರದಲ್ಲಿ ಭಾರತ ಕಲಿಯೋದ್ಯಾವಾಗ ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡಿದ್ದವು.

ಅದರರ್ಥ, ಅಲ್ಪಸಂಖ್ಯಾತ ವ್ಯಕ್ತಿ ಭಾರತದಲ್ಲಿ ಪ್ರಧಾನಿ ಆಗೋದು ಯಾವಾಗ ಎಂದು ಮಾಜಿ ಸಚಿವ ಪಿ ಚಿದಂಬರಂ, ಶಶಿ ತರೂರ್‌, ಮೆಹಬೂಬಾ ಮುಫ್ತಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತೀಕ್ಷ್ಣ ಉತ್ತರ ನೀಡಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಮನಮೋಹನ್‌ ಸಿಂಗ್‌ 10 ವರ್ಷ ಪ್ರಧಾನಿ ಆಗಿದ್ದರು. ಅಬ್ದುಲ್‌ ಕಲಾಂ 5 ವರ್ಷ ರಾಷ್ಟ್ರಪತಿಯಾಗಿದ್ದರು ಎನ್ನುವ ಲಿಸ್ಟ್‌ಗಳನ್ನೇ ನೀಡಿದೆ.

UK Prime Minister: ಬ್ರಿಟನ್‌ನಲ್ಲಿ ಇನ್ಮುಂದೆ ಕರ್ನಾಟಕದ ಅಳಿಯನ ದರ್ಬಾರ್‌..!

ಈಗ ಮತ್ತೆ ವರಸೆ ಬದಲಾಯಿಸಿರುವ ಶಶಿ ತರೂರ್‌, ವಿಸಿಬಲ್‌ ಮೈನಾರಿಟಿಯ ಪಿಎಂ ಕೇಳಿದ್ದಾಗಿ ಹೇಳಿದ್ದಾರೆ. ಅದರರ್ಥ, ನೋಡಿದ ತಕ್ಷಣ ಕಾಣ ಸಿಗುವ ಅಲ್ಪಸಂಖ್ಯಾತ ಅಂದರೆ ಮುಸ್ಲಿಂ ವ್ಯಕ್ತಿ ಪ್ರಧಾನಿ ಆಗುವುದು ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ. 'ಒಬ್ಬ ಮುಸ್ಲಿಂ, ಒಬ್ಬ ಕ್ರಿಶ್ಚಿಯನ್‌ ಪ್ರಧಾನಿಯಾಗುವುದನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more