ಪಂಚಮಸಾಲಿ ಮೀಸಲಾತಿ ಕಿಚ್ಚು, ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗುತ್ತಾ ಬಿಜೆಪಿ.?

Jun 22, 2022, 1:53 PM IST

ಬೆಂಗಳೂರು (ಜೂ. 22): ಮೀಸಲಾತಿ ವಿಚಾರದಲ್ಲಿ ಸರ್ಕಾರದ ಧೋರಣೆಗೆ ಅಸಮಾಧಾನ ವ್ಯಕ್ತವಾಗಿದೆ. ಸಮುದಾಯದ ಸಿಟ್ಟಿಗೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಲ್ಲಿ ಪಂಚಮಸಾಲಿಗಳು ಶಾಕ್ ನೀಡಿದೆ. ಪ್ರಭಾವಿ ನಾಯಕರ ಸೋಲಿಗೆ ಕಾರಣವಾಗಿದೆ ಸಮುದಾಯದ ಒಗ್ಗಟ್ಟು. ಹಾಗಾಗಿ ಸಮುದಾಯದ ಸಿಟ್ಟನ್ನು ಕಂಟ್ರೋಲ್ ಮಾಡಲು ಸರ್ಕಾರ ಮುಂದಾಗಿದೆ. 

2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ, ಜೂ. 27 ಗಡುವು, ಸರ್ಕಾರಕ್ಕೆ ಡ್ಯಾಮೇಜ್..?

 ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2 ‘ಎ’ ಅಡಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದ ಮುಖಂಡರ ಜೊತೆ ಮಾತುಕತೆ ನಡೆಸಲು ಸರ್ಕಾರ ಮುಂದಾಗಿದೆ.