Party Rounds: ಮೋದಿ ವಿಷಸರ್ಪ: ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲ

Party Rounds: ಮೋದಿ ವಿಷಸರ್ಪ: ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡಾಮಂಡಲ

Published : Apr 28, 2023, 08:24 PM IST

‘ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು’ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಖರ್ಗೆ ಹೇಳಿಕೆಯನ್ನು ಖಂಡಿಸಿದ್ದಾರೆ. 

ಬೆಂಗಳೂರು (ಏ.28): ‘ಪ್ರಧಾನಿ ನರೇಂದ್ರ ಮೋದಿ ವಿಷದ ಹಾವು’ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಖರ್ಗೆ ಹೇಳಿಕೆಯನ್ನು ಖಂಡಿಸಿದ್ದಾರೆ. ಅಲ್ಲದೆ, ಖರ್ಗೆಯವರು ತಮ್ಮ ಹೇಳಿಕೆ ಕುರಿತು ಮೋದಿಯವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಗದಗ ಜಿಲ್ಲೆಯ ನರೇಗಲ್‌ನಲ್ಲಿ ಗುರುವಾರ ಪ್ರಚಾರ ಭಾಷಣ ಮಾಡುವ ವೇಳೆ ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ವಿಷದ ಹಾವು’ ಎಂದು ಹೇಳಿದ್ದರು. 

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಖರ್ಗೆ ಆಡಿರುವ ಮಾತುಗಳು ಕಾಂಗ್ರೆಸ್ಸಿಗರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತವೆ. ಹೀಗೆ ಮಾತನಾಡಿಯೇ ಕಾಂಗ್ರೆಸ್‌ ಈ ಮಟ್ಟಕ್ಕೆ ಬಂದಿದೆ. ಕಾಂಗ್ರೆಸ್ಸಿನವರಿಗೆ ಅಧಿಕಾರದ ಅಮಲು ಇನ್ನೂ ಇಳಿದಿಲ್ಲ. ಕರ್ನಾಟಕ ಸುಸಂಸ್ಕೃತ ನಾಡು. ನಾವು ಎಲ್ಲರಿಗೂ ಗೌರವ ಕೊಡುತ್ತೇವೆ. ಖರ್ಗೆ ಅವರ ವಿಚಾರಗಳ ಬಗ್ಗೆ ವಿರೋಧ ಇದ್ದರೂ ಅವರ ಹಿರಿತನಕ್ಕೆ ನಾವು ಗೌರವ ಕೊಡುತ್ತೇವೆ. ಹಿರಿಯರಾಗಿ ಅವರು ಈ ರೀತಿ ಮಾತನಾಡಿದ್ದು ಖೇದಕರ ಎಂದು ಹೇಳಿದ್ದಾರೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more