Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Published : Apr 12, 2023, 08:29 PM IST

ಅಥಣಿಯಿಂದ ಬಿಜೆಪಿ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಕೈವಾಡವಿದೆ ಎನ್ನುವ ಅರ್ಥದಲ್ಲಿ ಇಂದು ಲಕ್ಷ್ಮಣ್‌ ಸವದಿ ಮಾತನಾಡಿದ್ದಾರೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಸಿಟ್ಟಾಗಿರುವ ಸವದಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 

ಬೆಂಗಳೂರು (ಏ.12): ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ಮಿಸ್‌ ಆಗಿದೆ. ಅಥಣಿಯಿಂದ ಬಿಜೆಪಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್‌ ಸವದಿ, ನೇರವಾಗಿ ಸಿಎಂ ವಿರುದ್ಧವೇ ಕಿಡಿಕಾರಿದರು.

ತಮಗೆ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪಾತ್ರವೇ ಹೆಚ್ಚಾಗಿರುವಂತೆ ಕಾಣುತ್ತಿದೆ ಎಂದು ಅವರು ಟಾಂಗ್‌ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ನಾನು ಈಗಾಗಲೇ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಏನೋ ಟಿಕೆಟ್‌ ತಪ್ಪಿದ ಬೇಸರದಲ್ಲಿ ಈ ಮಾತುಗಳಲ್ಲಿ ಆಡಿದ್ದಾರೆ. ಅವರಿಗೆ ಸಮಾಧಾನ ಮಾಡುವೆ ಎಂದು ಹೇಳಿದ್ದಾರೆ.

Party Rounds: ವಿಧಾನಸಭೆ ಚುನಾವಣೆಗೆ ಬಿಜೆಪಿ ಕಲಿಗಳು ರೆಡಿ!

ಇನ್ನೊಂದೆಡೆ ಅಥಣಿ ಟಿಕೆಟ್‌ ಪಡೆದಿರುವ ಮಹೇಶ್‌ ಕುಮಟಳ್ಳಿ, ಸವದಿ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರೆ, ಹಾಗೇನಾದರೂ ಸವದಿ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತಿಸುವುದಾಗಿ ರಾಜು ಕಾಗೆ ಹೇಳಿದ್ದಾರೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more