Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Party Rounds: ಲಕ್ಷ್ಮಣ್‌ ಸವದಿಗೆ ಟಿಕೆಟ್‌ ತಪ್ಪಿಸಿದ್ರಾ ಸಿಎಂ ಬೊಮ್ಮಾಯಿ?

Published : Apr 12, 2023, 08:29 PM IST

ಅಥಣಿಯಿಂದ ಬಿಜೆಪಿ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಕೈವಾಡವಿದೆ ಎನ್ನುವ ಅರ್ಥದಲ್ಲಿ ಇಂದು ಲಕ್ಷ್ಮಣ್‌ ಸವದಿ ಮಾತನಾಡಿದ್ದಾರೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಸಿಟ್ಟಾಗಿರುವ ಸವದಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
 

ಬೆಂಗಳೂರು (ಏ.12): ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ಮಿಸ್‌ ಆಗಿದೆ. ಅಥಣಿಯಿಂದ ಬಿಜೆಪಿ ಮಹೇಶ್‌ ಕುಮಟಳ್ಳಿಗೆ ಟಿಕೆಟ್‌ ನೀಡಿದೆ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್‌ ಸವದಿ, ನೇರವಾಗಿ ಸಿಎಂ ವಿರುದ್ಧವೇ ಕಿಡಿಕಾರಿದರು.

ತಮಗೆ ಟಿಕೆಟ್‌ ತಪ್ಪಿಸಿದ್ದರ ಹಿಂದೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪಾತ್ರವೇ ಹೆಚ್ಚಾಗಿರುವಂತೆ ಕಾಣುತ್ತಿದೆ ಎಂದು ಅವರು ಟಾಂಗ್‌ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬೊಮ್ಮಾಯಿ, ನಾನು ಈಗಾಗಲೇ ಸವದಿ ಅವರೊಂದಿಗೆ ಮಾತನಾಡಿದ್ದೇನೆ. ಏನೋ ಟಿಕೆಟ್‌ ತಪ್ಪಿದ ಬೇಸರದಲ್ಲಿ ಈ ಮಾತುಗಳಲ್ಲಿ ಆಡಿದ್ದಾರೆ. ಅವರಿಗೆ ಸಮಾಧಾನ ಮಾಡುವೆ ಎಂದು ಹೇಳಿದ್ದಾರೆ.

Party Rounds: ವಿಧಾನಸಭೆ ಚುನಾವಣೆಗೆ ಬಿಜೆಪಿ ಕಲಿಗಳು ರೆಡಿ!

ಇನ್ನೊಂದೆಡೆ ಅಥಣಿ ಟಿಕೆಟ್‌ ಪಡೆದಿರುವ ಮಹೇಶ್‌ ಕುಮಟಳ್ಳಿ, ಸವದಿ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದರೆ, ಹಾಗೇನಾದರೂ ಸವದಿ ಕಾಂಗ್ರೆಸ್‌ಗೆ ಬಂದರೆ ಅವರಿಗೆ ಸ್ವಾಗತಿಸುವುದಾಗಿ ರಾಜು ಕಾಗೆ ಹೇಳಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more