Party Rounds: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ: 5 ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್

Party Rounds: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ: 5 ಕೆಜಿ ಅಕ್ಕಿ, ಪ್ರತಿದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್

Published : May 01, 2023, 08:42 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. 

ಬೆಂಗಳೂರು (ಮೇ.01): ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

16 ಭರವಸೆಗಳ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಬಿಜೆಪಿಯ ಭರವಸೆಗಳು ಇಂತಿದೆ: 
* ಬಿಪಿಎಲ್ ಕುಟುಂಬಕ್ಕೆ ಯುಗಾದಿ, ದೀಪಾವಳಿ, ಗಣೇಶ ಹಬ್ಬಕ್ಕೆ 3 ಫ್ರೀ ಸಿಲಿಂಡರ್.
* ಪೋಷಣಾ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಅರ್ಧ ಲೀ. ನಂದಿನಿ ಹಾಲು.
* ಪ್ರತೀ ಕುಟುಂಬಕ್ಕೆ ಪಡಿತರದಲ್ಲಿ 5 ಕೆಜಿ ಸಿರಿಧಾನ್ಯ.
* ಎಸ್‌ಸಿ ಎಸ್‌ಟಿ ಮಹಿಳೆಯರಿಗೆ 5 ವರ್ಷಕ್ಕೆ 10 ಸಾವಿರ ಠೇವಣಿ.
* ಪ್ರತೀ ಮಹಾನಗರ ಪಾಲಿಕೆ ವಾರ್ಡ್‌ನಲ್ಲಿ ಅಟಲ್ ಆಹಾರ ಕೇಂದ್ರ.
* ವಿಶ್ವೇಶ್ವರಯ್ಯ ವಿದ್ಯಾಯೋಜನೆಯಡಿ ಸರ್ಕಾರಿ ಶಾಲೆಗಳ ಉನ್ನತೀಕರಣ.
* ಐಎಎಸ್‌ ಕೆಎಎಸ್‌ ಅಭ್ಯರ್ಥಿಗಳಿಗೆ ಆರ್ಥಿಕ ನೆರವು.
* ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತನೆ.
* ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ.
* ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ಸೌಲಭ್ಯ.
* ಸಮನ್ವಯ ಯೋಜನೆಯಡಿ ಸಣ್ಣ ಕೈಗಾರಿಗಳಲ್ಲಿ ಉದ್ಯೋಗಕ್ಕಾಗಿ ಒಡಂಬಡಿಕೆ.
* ಮಿಷನ್ ಸ್ವಾಸ್ಠ್ಯ ಯೋಜನೆಯಡಿ ಉಚಿತ ಆರೋಗ್ಯ ತಪಾಸಣೆ.
* ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು 1,500 ಕೋಟಿ ವಿನಿಯೋಗ.
* ಕರ್ನಾಟಕ ಅಪಾರ್ಟ್ಮೆಂಟ್ ಕಾಯಿದೆ ತಿದ್ದುಪಡಿ.
* ಬೆಂಗಳೂರಿನ ಹೊರಗೆ ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗ  ಸೃಷ್ಟಿಸುವ ಹಬ್.
* ಮೂರು ಜಿಲ್ಲೆಗೆ ಮೆಟ್ರೋ ಸೌಲಭ್ಯ ವಿಸ್ತರಣೆ ಹುಬ್ಬಳ್ಳಿ-ಧಾರಾವಾಢ, ಬೆಳಗಾವಿ ಮತ್ತು ಮೈಸೂರು.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more